ಭಾರತ, ಪಾಕ್ ಮಾತುಕತೆ ಮುಂದುವರಿಯಲಿ- ಜರ್ಮನ್ ಚಾನ್ಸಲರ್
ನವದೆಹಲಿ : ಆಗ್ರಾ ಶೃಂಗಸಭೆ ನಂತರ ಸ್ಥಗಿತಗೊಂಡಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಮಾತುಕತೆಗಳು ಮುಂದುವರಿಯಬೇಕು ಎಂದು ಜರ್ಮನ್ ಚಾನ್ಸಲರ್ ಗ್ರೆಹಾರ್ಡ್ ಷ್ರೋಡರ್ ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ವಾಜಪೇಯಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಂದ ಸ್ವಾಗತ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಷ್ರೋಡರ್, ಭಾರತ- ಪಾಕ್ ನಡುವಣ ಸಂಬಂಧ ಸುಧಾರಿಕೆಗೆ ಮಾತುಕತೆ ಮುಂದುವರಿಕೆ ಅಗತ್ಯ ಎಂದರು.
ರಾಜಕೀಯವಾಗಿ ಭಾರತ ಹಾಗೂ ಜರ್ಮನಿ ನಡುವಣ ಸಂಬಂಧ ಬಲವಾಗಿದೆ. ಉಭಯ ರಾಷ್ಟ್ರಗಳೂ ಅಭಿವೃದ್ಧಿಶೀಲ ಆರ್ಥಿಕತೆ ಹೊಂದಿವೆ. ಭಾರತೀಯ ಮಾರುಕಟ್ಟೆ ಹಾಗೂ ಜರ್ಮನಿಯ ಕೈಗಾರಿಕಾ ಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ದ್ವಿಪಕ್ಷೀಯ ಆರ್ಥಿಕ ಸಂಬಂಧಗಳು ಬಲಗೊಳ್ಳಬೇಕಾಗಿದೆ ಎಂದು ಷ್ರೋಡರ್ ಹೇಳಿದರು.
ಜಾಗತಿಕ ಭಯೋತ್ಪಾದಕತೆ ನಿರ್ಮೂಲನೆಯಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಶ್ನೆಯಾಂದಕ್ಕೆ ಅವರು ಉತ್ತರಿಸಿದರು. ಇಸ್ಲಮಾಬಾದ್ನಲ್ಲಿ ಪಾಕ್ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಷ್ರೋಡರ್ ಭಾನುವಾರ ಸಂಜೆ ಭಾರತಕ್ಕೆ ಆಗಮಿಸಿದ್ದರು.
(ಏಜೆನ್ಸೀಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications