ಬಂತಿದೋ ಕನ್ನಡ ಮಾಸ! ವಾಟಾಳರಿಗೋ ಕೈತುಂಬಾ ಕೆಲಸ!
ಬೆಂಗಳೂರು: ಕನ್ನಡ ಚಳವಳಿಗಾಗಿ ಬೆಳ್ಳಿಗದೆ ಪಡೆದ ಖ್ಯಾತಿಯ ವಾಟಾಳ್ ನಾಗರಾಜ್ ಅವರಲ್ಲಿ 2001 ನೇ ಸಾಲಿನ ನವಂಬರ್ ಕೂಡ ಕನ್ನಡ ಪರ ಕಾಳಜಿಯನ್ನು ಉಕ್ಕಿಸಿದೆ. ಅವರು, ನವಂಬರ್ 1 ರಿಂದ ರಾಜ್ಯಕ್ಕೆ ಪರಭಾಷಿಗರ ವಲಸೆಯನ್ನು ತಡೆಗಟ್ಟುವ ಹೋರಾಟ ನಡೆಸಲಿದ್ದಾರೆ.
ಕನ್ನಡ ಚಳವಳಿ ಪಕ್ಷ ದ ಮೂಲಕ ಚಳವಳಿ ನಡೆಸಲಾಗುವುದು ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ಹೇಳಿದರು. ಚಳವಳಿಯ ಮೊದಲ ಅಂಗವಾಗಿ- ಕನ್ನವಡಲ್ಲದ ನಾಮಫಲಕಗಳಿಗೆ ವಾಟಾಳ್ ಟಾರ್ ಬಳಿಯುತ್ತಾರೆ ಹಾಗೂ ನಾಮಫಲಕಗಳನ್ನು ಕಿತ್ತು ಎಸೆಯಲಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿರುವ ಬಗೆಗೆ ವಾಟಾಳ್ ತೀವ್ರ ಆತಂಕ ವ್ಯಕ್ತಪಡಿಸಿದರು. ಅವರ ಆತಂಕವನ್ನು ಅವರ ಮಾತುಗಳಲ್ಲೇ ಹೇಳುವುದಾದರೆ-
- ಆಡಳಿತ ಭಾಷೆಯಾಗಿ ಕನ್ನಡ ನೆಪಮಾತ್ರ. ಸರ್ಕಾರಿ ಸಮಾರಂಭಗಳು ಇಂಗ್ಲೀಷಿನಲ್ಲಿಯೇ ನಡೆಯುತ್ತವೆ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಮೂಲೆಗುಂಪು ಮಾಡಿದೆ.
- ಪರಭಾಷಿಗರ ವಲಸೆ ತಡೆಗಟ್ಟುವಲ್ಲಿ ಏಕೀಕರಣ ನಂತರ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳೂ ವಿಫಲವಾಗಿವೆ.
- ಇನ್ನೈದು ವರ್ಷಗಳಲ್ಲಿ ಕರ್ನಾಟಕದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರಾದರೆ ಆಶ್ಚರ್ಯವಿಲ್ಲ . ಕನಿಷ್ಠ 1 ಕೋಟಿಗೂ ಹೆಚ್ಚು ಪರಭಾಷಿಗರು ಕರ್ನಾಟಕದಲ್ಲಿದ್ದಾರೆ.
- ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರತಿಶತ 70 ರಷ್ಟು ಪರಭಾಷಿಕರು ಆಯ್ಕೆಯಾಗುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಬೇಕು. ತಡೆಗಟ್ಟಲೆಂದೇ ಕನ್ನಡ ಚಳವಳಿ ಪಕ್ಷ 6 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ವಾಟಾಳ್ ಅವರ ಕನ್ನಡ ಕಾಳಜಿಯ ಬಗ್ಗೆ ನೀವೇನಂತೀರಿ?
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications