ಸಾವಿರ ಸಿನಿಮಾ ಹಾಡುಗಳ ಸರದಾರ ವಿಜಯನಾರಸಿಂಹ ನಿಧನ
ಬೆಂಗಳೂರು : ಪುಟ್ಟಣ್ಣ ಕಣಗಾಲ್ರ ಪ್ರೀತಿಯ ಸಾಹಿತಿ ವಿಜಯ ನಾರಸಿಂಹ ಬುಧವಾರ ಬೆಳಗ್ಗೆ ಇಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದ ನಾರಸಿಂಹ ಕೆಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದರು.
ನಿಮೋನಿಯಾ ಜ್ವರದಿಂದ ಬಳಲುತ್ತಿದ್ದ ಅವರನ್ನು ಬುಧವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ನಾರಸಿಂಹ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾರೆ.
ಪುಟ್ಟಣ್ಣ ಕಣಗಾಲ್ ಹಾಗೂ ಸಿದ್ಧಲಿಂಗಯ್ಯ ಅವರ ಚಿತ್ರಗಳಿಗೇ ಹೆಚ್ಚು ಗೀತೆಗಳನ್ನು ಬರೆಯುತ್ತಿದ್ದ ವಿಜಯನಾರಸಿಂಹ ಅವರು ಬರೆದಿರುವ ಚಿತ್ರಗೀತೆಗಳ ಸಂಖ್ಯೆ ಸಾವಿರವನ್ನೂ ದಾಟಿದೆ. ಸಾವಿರ ಹಾಡುಗಳ ಸರದಾರ ಎಂದೇ ಖ್ಯಾತರಾಗಿದ್ದ ವಿಜಯನಾರಸಿಂಹ ಅವರು ಓಹಿಲೇಶ್ವರ ಚಿತ್ರಕ್ಕಾಗಿ ಬರೆದ ಗೀತೆಯಲ್ಲಿ ‘ಈ ದೇಹದಿಂದ ದೂರನಾದೆ ಏಕೆ ಆತ್ಮವೇ.. ಈ ಸಾವು ನ್ಯಾಯವೇ?’ ಎಂದು ಪ್ರಶ್ನಿಸಿದ್ದರು. (ಹುಟ್ಟು ಸಹಜ, ಸಾವು ನಿಶ್ಚಿತ ಎಂಬುದು ಅವರಿಗೂ ಗೊತ್ತಿತ್ತು.)
ಉಪಾಸನೆ, ಎಡಕಲ್ಲು ಗುಡ್ಡದ ಮೇಲೆ, ನಾಗರಹಾವು, ಮಾನಸಸರೋವರ, ಓಹಿಲೇಶ್ವರ ಮೊದಲಾದ ಚಿತ್ರಗಳಿಗೆ ಗೀತೆ ರಚಿಸಿದ್ದ, ವಿಜಯ ನಾರಸಿಂಹ ಬರೆದಿರುವ ಕೆಲವು ಜನಪ್ರಿಯ ಗೀತೆಗಳು :
ನೀತಿವಂತ ಬಾಳಲೇ ಬೇಕು - ಬಾಳು ಬೆಳಗಿತು, ಪಂಚಮವೇದ ಪ್ರೇಮದ ನಾದ - ಗೆಜ್ಜೆಪೂಜೆ, ಆಡೋಣಾ ನೀನೂ ನಾನು - ಕಸ್ತೂರಿ ನಿವಾಸ, ತೋಟದಾಗೆ ಹೂವಾ ಕಂಡೆ, ಹೂವಾ ಒಳಗೆ ನಿನ್ನ ಕಂಡೆ, ನನ್ನ ರಾಜಾ ರೋಜಾ... - ಚಿರಂಜೀವಿ, ಹೂವೊಂದು ಬಳಿ ಬಂದು ತಾಕಿತು ಎನ್ನೆದೆಯಾ... - ಶುಭಮಂಗಳ, ಠೂ ಠೂ ಠೂ ಬೇಡಪ್ಪ ... ನಿನ್ನ ಸಂಗ ಆಡಲೆಂದು ಬಂದೆನಪ್ಪ - ಪ್ರೇಮಮಯಿ, ಆ ದೇವರೆ ನುಡಿದ ಮೊದಲ ನುಡಿ ಪ್ರೇಮ ಪ್ರೇಮ.. - ಬಿಳಿ ಹೆಂಡ್ತಿ, ಯಾವ ತಾಯಿಯೂ ಪಡೆದ ಮಗಳಾದರೇನು - ಬಿಳಿ ಹೆಂಡ್ತಿ, ನಿನ್ನ ಸವಿ ನೆನಪೆ - ಅನುರಾಗ ಬಂಧನ, ಮನದ ಮಾತಿಗೆ ಮೌಲ ಬೇಲಿ - ನಂದಗೋಕುಲ, ಬಾರೇ ಬಾರೇ ಚಂದದ ಚಲುವಿನ ತಾರೆ - ನಾಗರಹಾವು ಹಾಗೂ ವಸಂತ ಬರೆದನು ಒಲವಿನ ಓಲೆ - ಬೆಸುಗೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications