ಅಟಲ್-ಬುಷ್ ಚರ್ಚೆ: ಭಯೋತ್ಪಾದನೆ ವಿರೋಧಿ ಬಣದ ಮಾತುಕತೆ
ವಾಷಿಂಗ್ಟನ್ : ಭಾರತದ ಪ್ರಧಾನಿ ಎ.ಬಿ.ವಾಜಪೇಯಿ ಅವರ ಜೊತೆ ಅಮೆರಿಕಾ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಭೇಟಿ, ಭಯೋತ್ಪಾದನೆ ವಿರುದ್ಧ ದನಿ ಎತ್ತಿರುವ ರಾಷ್ಟ್ರಗಳ ಒಕ್ಕೂಟದೊಂದಿಗೆ ಅಮೆರಿಕ ನಡೆಸಲಿರುವ ಮಾತುಕತೆಯ ಭಾಗವಾಗಿರುತ್ತದೆ ಎಂದು ಅಮೆರಿಕಾದ ಅಧಿಕಾರಿ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಉಗ್ರರ ಜಾಲಗಳ ಬುಡ ಸಮೇತ ಕಿತ್ತೊಗೆಯಲು ಕೈಜೋಡಿಸಿರುವ ಜಗತ್ತಿನ ರಾಷ್ಟ್ರಗಳು ಈಗೇನು ಮಾಡಬೇಕು, ಇದರಲ್ಲಿ ಜಗತ್ತಿನ ಮುಖ್ಯ ನಾಯಕರ ಪಾತ್ರವೇನು, ಈವರೆಗಿನ ಯುದ್ಧದ ಫಲಶೃತಿ ಎಂಥದು ಎಂಬಿತ್ಯಾದಿ ವಿಷಯಗಳ ಬಗ್ಗೆ ಅಧ್ಯಕ್ಷ ಬುಷ್ ಮಾತನಾಡುವರು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಕಾಂಡೋಲೀಜಾ ರೈಸ್ ಹೇಳಿದ್ದಾರೆ.
ಸೆಪ್ಟೆಂಬರ್ 11ರ ದಾಳಿಯಲ್ಲಿ ಮೃತಪಟ್ಟವರ ಪೈಕಿ ಅನೇಕ ಭಾರತೀಯರೂ ಇದ್ದಾರೆ. ಉಗ್ರರ ಮಟ್ಟ ಹಾಕಲು ನಮಗೆ ಭಾರತ ಬೆಂಬಲವನ್ನೂ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಭಾರತದೊಂದಿಗೆ ನಾವು ಇನ್ನಷ್ಟು ಒಟ್ಟು ಹೆಜ್ಜೆ ಇಡಲು ವಾಜಪೇಯಿ ಅವರೊಟ್ಟಿಗಿನ ಭೇಟಿ ಒಂದು ವೇದಿಕೆ. ಬೇಹುಗಾರಿಕೆ ವಿನಿಮಯ, ಕಾನೂನು ಜಾರಿಯಲ್ಲಿ ಸಹಕಾರ ಮತ್ತು ರಾಜತಾಂತ್ರಿಕ ಸಂಬಂಧಗಳ ವರ್ಧನೆಗೆ ಇದು ಸಕಾಲ ಎನ್ನುತ್ತಾರೆ ಸ್ಟೇಟ್ ಡಿಪಾರ್ಟ್ಮೆಂಟ್ನ ಉಪ ವಕ್ತಾರ ಫಿಲ್ ರೀಕರ್.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications