ದೇವೇಗೌಡರೆಂಬ ಐರಾವತವೂ ಉಗ್ರಪ್ಪನೆಂಬ ಪಮೇರಿಯನ್ ಮರಿಯೂ

ದೇವೇಗೌಡರ ಪ್ರಾಯಶ್ಚಿತ್ತ ಪಾದಯಾತ್ರೆ ಗುರುವಾರ ಬೆಂಗಳೂರಿನಲ್ಲಿ ಕೊನೆಗೊಂಡಿತಲ್ಲ - ಅದೇ ಗುರುವಾರ ರಾಜ್ಯೋತ್ಸವದ ದಿನ ಶಿವಾಜಿನಗರದಲ್ಲಿ ನಡೆದ ಬಹಿರಂಗ ಸಮಾವೇಶ ಕೃಷ್ಣ ಸರ್ಕಾರವನ್ನು ಹೀಗಳೆವ ವೇದಿಕೆಯಾಗಿತ್ತು . ಸಭೆಯ ಕೇಂದ್ರಬಿಂದು ಎಂದಿನಂತೆ ಗೌಡರೇ ಆದರೂ, ವೇದಿಕೆಯಲ್ಲಿ ಮಿಂಚಿದ್ದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಚ್. ಶ್ರೀನಿವಾಸ್. ಮಾತುಗಾರರಾದರೂ ಸಜ್ಜನ ಎಂದೇ ಹೆಸರಾದ ಅವರು ಸಿಎಂ ಕೃಷ್ಣ ಅವರನ್ನು ಏಕವಚನದಲ್ಲಿ ಬಯ್ಯಲು ಹಿಂಜರಿಯಲಿಲ್ಲ. ವಿರೋಧಿಗಳನ್ನು ತೆಗಳಲು ಶ್ರೀನಿವಾಸ್ ಬಳಸಿದ ಭಾಷೆ ಜನರಿಗೆ ರಂಜನೆ ಒದಗಿಸಿತು. ನೀವೂ ಓದಿ..
ಪ್ರಸಂಗ - 1
ದೇವೇಗೌಡರೆಂದರೆ ಏನೆಂದುಕೊಂಡಿದೀರಿ. ಅವರು ಆನೆ. ಕಾಡುಮಂತ್ರಿ ರಂಗನಾಥರ ಡಿಪಾರ್ಟ್ಮೆಂಟ್ ಆನೆಯಂತಲ್ಲ ; ಗೌಡರು ಇಂದ್ರನ ವಾಹನ ಐರಾವತದಂಥ ಆನೆ. ಸರ್ಕಾರಿ ಆನೆ ಹುಲ್ಲು ತಿಂದು, ಜಂಬೂಸವಾರಿಯಲ್ಲಿ ಅರಮನೆಯ ಅಂಬಾರಿ ಹೊರುತ್ತದೆ. ಆದರೆ, ನಮ್ಮೀ ಐರಾವತ ತಲೆಯ ಮೇಲೆ ಕೂರಿಸಿಕೊಳ್ಳುವುದು ರೈತರನ್ನು ಹಾಗೂ ಬಡಜನರನ್ನು. ಐರಾವತ ಇಡುತ್ತಿರುವ ಹೆಜ್ಜೆಗಳಿಗೆ ಸರ್ಕಾರ ಗಡಗಡ ನಡುಗಿ ಹೋಗಿದೆ.
ಪ್ರಸಂಗ - 2
ಗೌಡರ ಮನೆಯಲ್ಲಿ ಕುಂಯ್ ಕುಂಯ್ ಅನ್ನುತ್ತಿದ್ದ ಪಮೇರಿಯನ್ ಮರಿಗಳೆಲ್ಲ ಬೌ ಬೌ ಅನ್ನಲಿಕ್ಕೆ ಶುರುವಿಟ್ಟುಕೊಂಡಿವೆ. ನಮ್ಮ ಐರಾವತ ಒಮ್ಮೆ ಸೊಂಡಿಲು ಬೀಸಿದರೆ ಸಾಕು ಉಗ್ರಪ್ಪ, ಶಿವಕುಮಾರ್ನಂಥ ಪಮೇರಿಯನ್ಗಳು ಎಲ್ಲೆಲ್ಲಿ ಬೀಳುತ್ತವೋ.. ಇದೇ ಉಗ್ರಪ್ಪನನ್ನು ಎಂಎಲ್ಸಿ ಮಾಡಿದ್ದು ನಮ್ಮ ಗೌಡರೇ.
ಪ್ರಸಂಗ - 3
ಮಣ್ಣಿನ ಮಗ ಅನ್ನೋದು ದೇವೇಗೌಡರಿಗೆ ವಿಶ್ವ ವಿದ್ಯಾಲಯ ಕೊಟ್ಟ ಬಿರುದಲ್ಲ , ರೈತರು ಕೊಟ್ಟ ಬಿರುದು. ಮಣ್ಣಿನ ಮಗ ಅಂದರೆ ಕೆಲವರಿಗೆ ಕಣ್ಣು ಕೆಂಪಾಗ್ತದೆ. ಇತ್ತೀಚೆಗೆ ಮುಲಾಯಂ ಸಿಂಗ್ ಯಾದವ್ ಬೆಂಗಳೂರಿಗೆ ಬಂದಿದ್ದರಲ್ಲ , ಅವರು ಗೌಡರನ್ನು ಭಾರತದ ಮಣ್ಣಿನ ಮಗ ಅಂದರು. ಇಪ್ಪತ್ತೆೈದು ಎಸ್.ಎಂ.ಕೃಷ್ಣ ಹಾಕಿದರೆ ಒಬ್ಬ ಮುಲಾಯಮ್ಮು. ಅಂಥವರೇ ಮಣ್ಣಿನ ಮಗ ಅಂದಮೇಲೆ ಇವರದೆಲ್ಲ ಯಾವ ಲೆಕ್ಕ.
ಪ್ರಸಂಗದೊಳಗಿನ ಉಪ ಪ್ರಸಂಗಗಳು
* ಕೇಂದ್ರದಲ್ಲಿರುವುದು ಬೈಠಕ್ ಸರ್ಕಾರ, ರಾಜ್ಯದ್ದು ಹೈಟೆಕ್ ಸರ್ಕಾರ. ಒಟ್ಟಿನಲ್ಲಿ ಎರಡೂ ಠಕ್ಕು ಸರ್ಕಾರಗಳೇ.
* ಇನ್ನೊಮ್ಮೆ ರೈತರ ಮೇಲೆ ದೊಣ್ಣೆ ಎತ್ತಿದರೆ, ಎತ್ತಿದವರ ಬುರುಡೆ ಕಾಯಿಸುತ್ತೇವೆ.
* ಪಾದಯಾತ್ರೆಯನ್ನು ಜಾತಿಯ ಹೋರಾಟ, ರಾಜಕೀಯ ಸ್ಟಂಟ್ ಅನ್ನುವವರ ಬಾಯಿಗೆ ಹುಳು ಬೀಳುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications