Get Updates
Get notified of breaking news, exclusive insights, and must-see stories!

ನ.3 ರಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ಜಲ ಸಮ್ಮೇಳನ

ಬೆಂಗಳೂರು : ಮೂರು ದಿನಗಳ ರಾಷ್ಟ್ರೀಯ ಜಲ ಸಮ್ಮೇಳನ, ಬೆಂಗಳೂರಿನಲ್ಲಿ ಶನಿವಾರದಿಂದ ಆರಂಭವಾಗಲಿದೆ. ಈ ಸಮ್ಮೇಳನದಲ್ಲಿ ಪ್ರವಾಹ, ಬರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಲಾಗುವುದು. ಈ ವಿಷಯವನ್ನು ರಾಜ್ಯ ಜಲಸಂಪನ್ಮೂಲ ಸಚಿವ ಎಚ್‌.ಕೆ. ಪಾಟೀಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದು 9ನೇ ರಾಷ್ಟ್ರೀಯ ಸಮ್ಮೇಳನವಾಗಿದ್ದು, ಇದರಲ್ಲಿ ಭಾರತದ ವಿವಿಧ ಭಾಗಗಳಿಂದ ಆಗಮಿಸುವ 300ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಲ್ಳುತ್ತಿದ್ದಾರೆ. ಸಮ್ಮೇಳನದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ 49 ಪ್ರಬಂಧಗಳನ್ನು ಮಂಡಿಸಲಾಗುವುದು ಎಂದು ಪಾಟೀಲ್‌ ಸಮ್ಮೇಳನದ ವಿವರಗಳನ್ನು ನೀಡಿದರು.

ಕರ್ನಾಟಕ ಸರಕಾರ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯ ಜಂಟಿಯಾಗಿ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಜಲ ಸಂರಕ್ಷಣೆ, ನೀರು ವಲಯದಲ್ಲಿ ಮಹಿಳೆಯರ ಪಾತ್ರ, ಪ್ರವಾಹ, ಬರಗಾಲದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ನದಿ ಕಣಿವೆಯಲ್ಲಿ ಜಲ ಹಂಚಿಕೆ ಮೊದಲಾದ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು.

ಬೃಹತ್‌ ಜಲಸಂಪನ್ಮೂಲ ಯೋಜನೆಗಳಿಂದ ನಿರ್ವಸತಿಗರಾದವರ ಸಮಸ್ಯೆಗಳು ಹಾಗೂ ನೀರು ಬಳಕೆದಾರರ ಸಂಘಗಳ ಬಗ್ಗೆ ಕೂಡ ಸಮಾಲೋಚನೆ ನಡೆಸಲಾಗುವುದು ಎಂದು ಪಾಟೀಲ್‌ ಹೇಳಿದರು. ಈ ಸಮ್ಮೇಳನವು ಹಾಲಿ ಇರುವ ಕಾರ್ಯಯೋಜನೆಗಳನ್ನು ಮತ್ತಷ್ಟು ಕ್ರಿಯಾಶೀಲಗೊಳಿಸಲು ನೆರವು ನೀಡಲಿದೆ ಎಂದು ಅವರು ಹೇಳಿದರು.

(ಪಿ.ಟಿ.ಐ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+