ಕಾವೇರಿವಿವಾದ : 25% ಇತ್ಯರ್ಥ, 75% ವರ್ಷದೊಳಗೆ ಇತ್ಯರ್ಥ
ನವದೆಹಲಿ : ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಶೀತಲಯುದ್ಧಕ್ಕೆ ಕಾರಣವಾಗಿರುವ ಕಾವೇರಿ ಜಲ ವಿವಾದ ಇನ್ನೊಂದು ವರ್ಷದಲ್ಲಿ ಬಗೆಹರಿಯಬಹುದೆನ್ನುವ ವಿಶ್ವಾಸವನ್ನು ಕೇಂದ್ರ ಜಲ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಬಿಜೊಯಾ ಚಕ್ರವರ್ತಿ ವ್ಯಕ್ತಪಡಿಸಿದ್ದಾರೆ.
ಒಂಭತ್ತನೇ ರಾಷ್ಟ್ರೀಯ ಜಲ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದದ ಶೇ.25 ರಷ್ಟು ಈಗಾಗಲೇ ಪರಿಹಾರವಾಗಿದ್ದು, ಉಳಿದ ಶೇ.75 ರಷ್ಟು ಭಾಗ ಇನ್ನೊಂದು ವರ್ಷದೊಳಗೆ ಇತ್ಯರ್ಥವಾಗಬಹುದು ಎಂದರು.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, ಜಲಕ್ಷಾಮವನ್ನು ವ್ಯವಸ್ಥಿತವಾಗಿ ನಿಭಾಯಿಸಲು ಪ್ರತಿಯಾಂದು ನದಿಯ ಜಲಾನಯನ ಪ್ರದೇಶದಲ್ಲಿಯೂ ಸಮರ್ಪಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದರು.
ಯೋಜನೆ ಆಧಾರಿತ ನೀರಾವರಿ ಯೋಜನೆಗಳನ್ನು ರೂಪಿಸುವ ಬದಲು ಜನರ ಅಗತ್ಯಗಳನ್ನು ಪೂರೈಸುವ ಯೋಜನೆಗಳನ್ನು ರೂಪಿಸಲು ಅಗತ್ಯವಾದ ನೀತಿಯನ್ನು ಅನುಸರಿಸಬೇಕು ಎಂದು ರಾಷ್ಟ್ರೀಯ ಜಲ ಸಮಾವೇಶದಲ್ಲಿ ಸಚಿವೆ ಬಿಜೊಯಾ ಚಕ್ರವರ್ತಿ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications