ಮುಂದಿನ ವರ್ಷದಿಂದ ಕಾಲೇಜಲ್ಲಿ ಕಂಪ್ಯೂಟರ್ ಶಿಕ್ಷಣ ಕಡ್ಡಾಯ
ಬೆಂಗಳೂರು : 2002-03ನೇ ಶೈಕ್ಷಣಿಕ ವರ್ಷದಿಂದ ಪದವಿ ಮಟ್ಟದಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಕಡ್ಡಾಯ ಮಾಡಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸುವ ರೀತಿಯಲ್ಲಿ ಈ ಶಿಕ್ಷಣ ನೀಡಲಾಗುವುದು ಎಂದು ಅವರು ತಿಳಿಸಿದರು.
ಜ್ಞಾನಾರ್ಜನೆಗಾಗಿ ಶಿಕ್ಷಣ ಎಂಬ ನೀತಿ ಈಗ ಬದಲಾಗಿದೆ. ಉದ್ಯೋಗಕ್ಕಾಗಿಯೇ ಓದುವ ಕಾಲ ಬಂದಿದೆ. ಈ ನಿಟ್ಟಿನಲ್ಲಿ ಬ್ಯಾಚುಲರ್ ಇನ್ ಕಂಪ್ಯೂಟರ್ ಅಪ್ಲಿಕೇಷನ್ಸ್ ಹಾಗೂ ಬ್ಯಾಚುಲರ್ ಇನ್ಬಯೋಟೆಕ್ ಕೋರ್ಸ್ಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ಪ್ರೆಸ್ಕ್ಲಬ್ ಸೋಮವಾರ ಆಯೋಜಿಸಿದ್ದ ಪತ್ರಿಕಾ ಸಂದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಪ್ರಸಕ್ತ ಜಾರಿಯಲ್ಲಿರುವ ಶಿಕ್ಷಣ ನೀತಿಯಲ್ಲಿ, ಕಂಪ್ಯೂಟರ್ ಕೇವಲ ಐಚ್ಛಿಕವಾಗಿದೆ. ಈ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದ ಎಲ್ಲ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗುವುದು ಎಂದರು.
40 ಗಂಟೆ ಪ್ರವಚನ: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಉಪನ್ಯಾಸಕರ ಜವಾಬ್ದಾರಿ ಹೆಚ್ಚಿಸುವ ಸಲುವಾಗಿ ಬರುವ ವರ್ಷದಿಂದ ವಿದ್ಯಾರ್ಥಿಗಳಿಂದಲೇ ಉಪನ್ಯಾಸಕರ ಮೌಲ್ಯಮಾಪನ ಮಾಡಿಸುವ ಪದ್ಧತಿ ಜಾರಿಗೆ ತರಲಾಗುವುದು. ಅಲ್ಲದೆ ವಾರದಲ್ಲಿ ಕನಿಷ್ಠ 40 ಗಂಟೆಗಳ ಕಾಲ ಉಪನ್ಯಾಸಕರು ಪಾಠ ಮಾಡಬೇಕು ಎಂಬುದನ್ನು ಕಡ್ಡಾಯಗೊಳಿಸಲಾಗುವುದು ಎಂದರು.
ಉಪಗ್ರಹ ಶಿಕ್ಷಣ : ಕಂಪ್ಯೂಟರ್ ಶಿಕ್ಷಣಕ್ಕೆ ತಜ್ಞ ಉಪನ್ಯಾಸಕರ ಕೊರತೆ ಇದ್ದು, ಈ ಕೊರತೆ ನೀಗಿಸಲು ಉಪಗ್ರಹ ಮೂಲಕ ಪಾಠ ಪ್ರವಚನ ನಡೆಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದೂ ಅವರು ಹೇಳಿದರು. ಈಗಾಗಲೇ ಮೈಸೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಪಗ್ರಹ ಶಿಕ್ಷಣ ಪಠ್ಯ ಸಿದ್ಧಪಡಿಸಿದ್ದು, ಮುಖ್ಯಮಂತ್ರಿ ಕೃಷ್ಣ ಅವರು ಈ ತಿಂಗಳು ಅದನ್ನು ಉದ್ಘಾಟಿಸಲಿದ್ದಾರೆ ಎಂದೂ ಪರಮೇಶ್ವರ್ ಹೇಳಿದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications