ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಈ-ಗವರ್ನೆನ್ಸ್ ಅಳವಡಿಕೆ
ಬೆಂಗಳೂರು: ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಈ- ಗವರ್ನೆನ್ಸ್ ವ್ಯವಸ್ಥೆ ಅಳವಡಿಕೆ ಕಾರ್ಯವನ್ನು ಟಾಟಾ ಕನ್ಸಲ್ಟೆನ್ಸಿಯ ಸಿಎಮ್ಸಿ ಲಿಮಿಟೆಡ್ ಪೂರ್ಣಗೊಳಿಸಿದೆ. ಇದರಿಂದಾಗಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರ ತವರಿನ ಆಡಳಿತ ವ್ಯವಹಾರಗಳು ಕಂಪ್ಯೂಟರೀಕೃತಗೊಂಡಿವೆ.
ಸರಕಾರದ ಇ- ಗವರ್ನೆನ್ಸ್ ಯೋಜನೆಯಡಿಯಲ್ಲಿ ಮದ್ದೂರಿನ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಿಎಮ್ಸಿಯ ಅಂತರರಾಷ್ಟ್ರೀಯ ಉಪಾಧ್ಯಕ್ಷ ಎಸ್. ಬಾಲಕೃಷ್ಣನ್ ಹೇಳಿದರು. ಅವರು ಭಾನುವಾರ ಬೆಂಗಳೂರು ಐಟಿ.ಕಾಮ್ನಲ್ಲಿ ಮಾತನಾಡುತ್ತಿದ್ದರು. ಸಿಎಮ್ಸಿಯ ಈ ಯೋಜನೆಯನ್ನು ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಔಪಚಾರಿಕವಾಗಿ ಉದ್ಘಾಟಿಸುವುದಕ್ಕೆ ರಾಜ್ಯ ಸರಕಾರದ ಅನುಮತಿಗಾಗಿ ಕಾಯಲಾಗುತ್ತಿದೆ.
ಪ್ರಸ್ತುತ ಇರುವ ಮಾಹಿತಿ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವುದು ಮತ್ತು ಆದಷ್ಟು ಬೇಗ ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಆದಷ್ಟು ಬೇಗನೆ ತಲುಪುವಂತೆ ಮಾಡುವುದು ನಮ್ಮ ಉದ್ದೇಶ. ಅಲ್ಲದೆ, ಇದರಿಂದ ಮುಖ್ಯಮಂತ್ರಿಗಳು ಮತ್ತು ಸಚಿವಾಲಯದ ನಡುವೆ ಸಂಬಂಧ ಏರ್ಪಡುವುದೂ ಸಾಧ್ಯವಾಗುತ್ತದೆ. ಜೊತೆಗೆ ಸಾರ್ವಜನಿಕರ ಅಗತ್ಯಗಳನ್ನು ಪೂರೈಸುವುದು ಸುಲಭವಾಗುತ್ತದೆ ಎಂದು ಬಾಲಕೃಷ್ಣ ಹೇಳಿದ್ದಾರೆ.
ಮಹಾರಾಷ್ಟ್ರ, ಸಿಕ್ಕಿಂ ಮತ್ತು ಚತ್ತೀಸ್ಘಡ ರಾಜ್ಯಗಳೂ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಉತ್ಸುಕವಾಗಿವೆ. ರಾಜ್ಯದಲ್ಲಿ ಮುಂದಿನ ವರ್ಷ ಐದು ಸರಕಾರಿ ಕಚೇರಿಗಳಿಗೆ ಪರಸ್ಪರ ಸಂಪರ್ಕ ಒದಗಿಸಲಾಗುವುದು ಎಂದು ಬಾಲಕೃಷ್ಣ ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications