ಚುನಾವಣೆ ಪ್ರಚಾರ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಕೊಲೆ
ಬೆಂಗಳೂರು : ಹಗಲಿನಲ್ಲಿಯೇ ವೃದ್ಧೆಯಾಬ್ಬಳ ಕುತ್ತಿಗೆಗೆ ಬಟ್ಟೆ ಬಿಗಿದು ಸಾಯಿಸಿ, ಸುಮಾರು 50 ಸಾವಿರ ರುಪಾಯಿ ಮೌಲ್ಯದ ಹಣ ಮತ್ತು ಒಡವೆ ಅಪಹರಿಸಿದ ಘಟನೆ ನಗರದ ಶೇಷಾದ್ರಿಪುರಂ ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೆಂಕಟ ನರಸಯ್ಯ ಅವರ ಪತ್ನಿ ನರಸಮ್ಮ (70) ಮನೆಯಲ್ಲಿ ಒಬ್ಬರೇ ಇದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ವೆಂಕಟ ನರಸಯ್ಯ ಅವರು ಹತ್ತಿರದ ತಮ್ಮ ಅಳಿಯನ ಎಸ್ಟಿಡಿ ಬೂತ್ಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಈ ಸಮಯವನ್ನು ಗಮನಿಸಿದ ಪಾತಕಿಗಳು ಸಂಜೆ ನಾಲ್ಕು ಗಂಟೆಗೆ ನರಸಮ್ಮ ಅವರನ್ನು ಕೊಲೆ ಮಾಡಿ ಮಾಂಗಲ್ಯ, ಬಳೆ, ಕಿವಿಯೋಲೆಗಳು ಮತ್ತು ಬೀರುವಿನಲ್ಲಿದ್ದ ಹಣವನ್ನು ದೋಚಿದ್ದಾರೆ.
ಕೊಲೆ ನಡೆದ ಮನೆಯ ಮುಂದೆ ಚುನಾವಣಾ ಪ್ರಚಾರದ ಆಟೋ ನಿಂತಿತ್ತು ಎಂದು ತಿಳಿಸಿರುವ ಪೊಲೀಸರು ಪ್ರಚಾರದ ನೆಪದಲ್ಲಿ ದುಷ್ಕರ್ಮಿಗಳು ಮನೆಗೆ ನುಗ್ಗಿರಬಹುದು ಎಂದು ಶಂಕಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಎಚ್. ಟಿ. ಸಾಂಗ್ಲಿಯಾನಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪರಿಚಿತರಿಂದಲೇ ಕೊಲೆ- ಸಾಂಗ್ಲಿಯಾನ ಶಂಕೆ?
ನರಸಮ್ಮ ಅವರ ಪರಿಚಿತರೇ ಈ ಕೊಲೆ ಮಾಡಿರಬಹುದು ಎಂದು ಸಾಂಗ್ಲಿಯಾನಾ ಶಂಕಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಕಾಫಿ ಕಪ್ಗಳಿದ್ದು, ಇಬ್ಬರು ವ್ಯಕ್ತಿಗಳು ಈ ಕೃತ್ಯದಲ್ಲಿ ಇಬ್ಬರು ವ್ಯಕ್ತಿಗಳು ಭಾಗಿಯಾಗಿರಬಹುದು. ಕೊಲೆಗಾರರು ನರಸಮ್ಮ ಅವರ ಚಲನ ವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ನಂತರ ಈ ಅಪರಾಧವೆಸಗಿರಬಹುದು ಎಂದು ಅವರು ಅಭಿಪ್ರಾಯ ಪಟ್ಟರು.(ಇನ್ಫೋ ವಾರ್ತೆ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications