ಯುದ್ಧ : ಕಾಲು ಕಳಕೊಂಡ ಯೋಧರಿಗೆ ಉಚಿತ ಜೈಪುರ ಕಾಲು
ಜೈಪುರ: ಅಫ್ಘಾನಿಸ್ತಾನದ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಸಾವಿರಾರು ಯೋಧರಿಗೆ ಕೃತಕ ಕಾಲುಗಳನ್ನು ಒದಗಿಸಲು ಜೈಪುರದ ಸ್ವಯಂ ಸೇವಾ ಸಂಸ್ಥೆಯಾಂದು ಮುಂದೆ ಬಂದಿದೆ.
ಯುದ್ಧದಲ್ಲಿ ಕಾಲು ಕಳೆದುಕೊಂಡು ಅಂಗವಿಕಲರಾಗುವುದು ಹೊಸ ಮಾತೇನಲ್ಲ. ಈ ದುರಂತವನ್ನು ಗಮನಿಸಿ ಜೈಪುರದ ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿಯ ಸ್ವಯಂ ಸೇವಕರು ನತದೃಷ್ಟ ಯೋಧರಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಪ್ರತಿದಿನ ಕನಿಷ್ಠ 40 ಮಂದಿಗೆ ಕೃತಕ ಕಾಲುಗಳನ್ನು ಉಚಿತವಾಗಿ ನೀಡುವ ಈ ಸಂಸ್ಥೆಯ ಕಾಲುಗಳನ್ನು ಜೈಪುರ ಕಾಲುಗಳೆಂದೇ ಕರೆಯುತ್ತಾರೆ.
1996 ಮತ್ತು 97ರಲ್ಲಿ ಅಫ್ಘಾನಿನಲ್ಲಿ ಕಾಲು ಕಳೆದುಕೊಂಡಿದ್ದ ಸೈನಿಕರಿಗೂ ಈ ಸಂಸ್ಥೆಯ ಕಾರ್ಯಕರ್ತರು ಸಹಾಯ ಮಾಡಿದ್ದರು. ಪ್ರಸ್ತುತ ಅಫ್ಘಾನ್ ಸೈನಿಕರಿಗಾಗಿ ಜೈಪುರ ಕಾಲುಗಳು ರೆಡಿಯಾಗಿವೆ. ಆದರೆ ಇದಕ್ಕೆ ಪೂರಕವಾದ ಸಾಗಾಟ ಮತ್ತು ಅಳವಡಿಕೆ ಪ್ರಕ್ರಿಯೆಗಳಿಗೆ ಸರಕಾರದ ನೆರವು ಬೇಕಾಗಿದೆ.
1,500 ಕೃತಕ ಕಾಲುಗಳ ನೆರವನ್ನು ಅಫ್ಘಾನಿಗೆ ರವಾನಿಸುವುದಾಗಿ ಜಸ್ವಂತ್ ಸಿಂಗ್ ಪ್ರಕಟಿಸಿದ್ದರು. ಆದರೆ ನಾವು ಕೃತಕ ಕಾಲುಗಳನ್ನು ತಯಾರಿಸಿಟ್ಟಿದ್ದೇವೆ. ಸರಕಾರ ನಮ್ಮನ್ನು ಈವರೆಗೆ ಸಂಪರ್ಕಿಸಿಲ್ಲ. ಈ ಕುರಿತು ಸರಕಾರಕ್ಕೆ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ವಿಕಲಾಂಗ ಸಮಿತಿಯ ಆಡಳಿತಾಧಿಕಾರಿ ಮಹವೀರ್ ಸಿಂಗ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications