ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತನ ಆತ್ಮಹತ್ಯೆ
ಧಾರವಾಡ : ದುರ್ಬಲ ಮಾನ್ಸೂನ್ನಿಂದಾಗಿ ಬೆಳೆ ಕೈ ಕಚ್ಚಿದ್ದರಿಂದ ಹತಾಶನಾದ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರೈತ ರಸಗೊಬ್ಬರ ಹಾಗೂ ಬೀಜಗಳನ್ನು ಕೊಳ್ಳಲು ಬ್ಯಾಂಕ್ ಮತ್ತು ಸಹಕಾರ ಸಂಘಗಳಿಂದ ಸಾಲ ಪಡೆದಿದ್ದ . ಬೆಳೆ ನಾಶಗೊಂಡದ್ದರಿಂದ ಹತಾಶನಾದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೊಟ್ಟಿಗವಾಡ ಗ್ರಾಮದ ರೈತನ ಆತ್ಯಹತ್ಯೆಯಿಂದಾಗಿ ಈಚಿನ ದಿನಗಳಲ್ಲಿ ಬೆಳೆ ನಾಶದಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 25 ಕ್ಕೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಪಿಟಿಐ)
Comments
Story first published: Thursday, November 8, 2001, 5:30 [IST]