ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತನ ಆತ್ಮಹತ್ಯೆ

By Staff
|
Google Oneindia Kannada News

ಧಾರವಾಡ : ದುರ್ಬಲ ಮಾನ್ಸೂನ್‌ನಿಂದಾಗಿ ಬೆಳೆ ಕೈ ಕಚ್ಚಿದ್ದರಿಂದ ಹತಾಶನಾದ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮದ ರೈತ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರೈತ ರಸಗೊಬ್ಬರ ಹಾಗೂ ಬೀಜಗಳನ್ನು ಕೊಳ್ಳಲು ಬ್ಯಾಂಕ್‌ ಮತ್ತು ಸಹಕಾರ ಸಂಘಗಳಿಂದ ಸಾಲ ಪಡೆದಿದ್ದ . ಬೆಳೆ ನಾಶಗೊಂಡದ್ದರಿಂದ ಹತಾಶನಾದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೊಟ್ಟಿಗವಾಡ ಗ್ರಾಮದ ರೈತನ ಆತ್ಯಹತ್ಯೆಯಿಂದಾಗಿ ಈಚಿನ ದಿನಗಳಲ್ಲಿ ಬೆಳೆ ನಾಶದಿಂದಾಗಿ ಧಾರವಾಡ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 25 ಕ್ಕೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಪಿಟಿಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X