ಜಿಗಣಿಯ ಯೋಗಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ಸಮ್ಮೇಳನ
ಬೆಂಗಳೂರು : ಸ್ವಾಮಿ ವಿವೇಕಾನಂದ ಸಂಸ್ಥಾನ ನವೆಂಬರ್ 17ರಿಂದ ಐದು ದಿನಗಳ 12ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.
ಯೋಗದ ಅಳವಡಿಕೆ ಮತ್ತು ಅಧ್ಯಯನ ಮಿತಿಗಳು ಎಂಬ ವಿಷಯವನ್ನು ಆಧಾರವಾಗಿರಿಸಿಕೊಂಡು ನಡೆಯುವ ಈ ಸಮ್ಮೇಳನವು ಜಿಗಣಿಯ ಯೋಗ ಕೇಂದ್ರದ ಪ್ರಶಾಂತಿ ಕುಟೀರದಲ್ಲಿ ನಡೆಯಲಿದೆ ಎಂದು ಸಂಸ್ಥಾನದ ಯೋಗ ಥೆರಪಿಯ ಮುಖ್ಯಸ್ಥೆ ಡಾ. ಆರ್. ನಾಗರತ್ನಮ್ಮ ತಿಳಿಸಿದ್ದಾರೆ.
ಸುಮಾರು 750 ಮಂದಿ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಯೋಗಕ್ಕೆ ಸಂಬಂಧಿಸಿದಂತೆ ಸಮ್ಮೇಳನ ಪೂರ್ವ ಕಾರ್ಯಾಗಾರವನ್ನು ನವೆಂಬರ್ 8ರಿಂದ 16ರವರೆಗೆ ನಡೆಸಲಾಗುವುದು. ಇದರಲ್ಲಿ ಆಧುನಿಕ ವಿಜ್ಞಾನ, ಯೋಗ ಮತ್ತು ಉಪನಿಷತ್ತುಗಳ ಬಗ್ಗೆ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ ಎಂದು ನಾಗರತ್ನಮ್ಮ ಹೇಳಿರು.
ಆಧುನಿಕ ಭೌತ ಶಾಸ್ತ್ರ ದ ಆಯಾಮಗಳ ಅಧ್ಯಯನವನ್ನು ಜನರಿಗೆ ಪರಿಚಯಿಸುವುದು ಈ ಪೂರ್ವ ಕಾರ್ಯಾಗಾರದ ಉದ್ದೇಶ. ಪ್ರೊ. ಎನ್. ವಿ. ಸಿ. ಸ್ವಾಮಿ ಮತ್ತು ಡಾ. ಎಚ್. ಆರ್. ನಾಗೇಂದ್ರ ಗೋಷ್ಠಿಗಳನ್ನು ನಿರ್ವಹಿಸುವರು. ಸಮ್ಮೇಳನಾನಂತರ ನವೆಂಬರ್ 22ರಿಂದ 30ರವರೆಗೆ ಯೋಗ ಥೆರಪಿಯ ಅನಾರೋಗ್ಯದಿಂದ ಬಳಲುತ್ತಿರುವವರಿಗಾಗಿ ಏಳು ದಿನಗಳ ಇನ್ನೊಂದು ಕಾರ್ಯಾಗಾರವಿರುತ್ತದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications