ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ನೂತನ ವರ್ಗಾವಣಾ ನೀತಿ
ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ಹೊಸ ವರ್ಗಾವಣೆ ನೀತಿಯನ್ನು ಸರ್ಕಾರ ಸೋಮವಾರ ಅಳವಡಿಸಿದೆ ಎಂದು ವಾರ್ತಾ ಸಚಿವ ಎಂ.ಶಿವಣ್ಣ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸೋಮವಾರ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ- ಪಂಚಾಯತ್ ರಾಜ್ ಸಚಿವ ಎಂ.ವೈ. ಘೋರ್ಪಡೆ ನೇತೃತ್ವದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿದ ನೂತನ ವರ್ಗಾವಣಾ ನೀತಿಯನ್ನು ಸಂಪುಟ ಸಭೆ ಒಪ್ಪಿಕೊಂಡಿದೆ ಎಂದರು.
ಪ್ರತಿ ಇಲಾಖೆಯಲ್ಲಿನ ಒಟ್ಟು ಸಿಬ್ಬಂದಿಯಲ್ಲಿ ಪ್ರತಿಶತ 5 ಮೀರದಂತೆ ವರ್ಗಾವಣೆ ಮಾಡಲು ಅಧಿಕಾರವುಳ್ಳ ಕೇಡರ್ ಮೇನೇಜ್ಮೆಂಟ್ಗಳನ್ನು ಹೊಸ ನೀತಿಯ ಅನ್ವಯ ಸರ್ಕಾರ ನೇಮಿಸಲಿದೆ. ಜಿಲ್ಲಾಧಿಕಾರಿಗಳು ಕೇಡರ್ ಮೇನೇಜ್ಮೆಂಟ್ನ ಮುಖ್ಯಸ್ಥರಾಗಿದ್ದು, ಅವರು ಸಿ ಮತ್ತು ಡಿ ವರ್ಗಗಳ ಸಿಬ್ಬಂದಿಯ ಅಂತರ ಜಿಲ್ಲೆಯ ವರ್ಗಾವಣೆಯನ್ನು ನಿರ್ಣಯಿಸುವರು. ಎ ಮತ್ತು ಬಿ ವರ್ಗದ ಅಧಿಕಾರಿಗಳ ವರ್ಗಾವಣೆ ಸಂಬಂಧ ಆಯಾ ಇಲಾಖೆಯ ಸಚಿವರ ನೇತೃತ್ವದ ಸಮಿತಿ ನಿರ್ಣಯ ಕೈಗೊಳ್ಳುವುದು.
ನೂತನ ವರ್ಗಾವಣೆ ನೀತಿಯು ಪಾರದರ್ಶಕವಾಗಿದ್ದು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಿದೆ ಎಂದು ಶಿವಣ್ಣ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications