‘ನೃಪತುಂಗ’ನನ್ನು ಏಕಮುಖ ತೆಕ್ಕೆಯಿಂದ ಬಿಡಿಸಿದ ಸಾಂಗ್ಲಿಯಾನ
ಬೆಂಗಳೂರು : ಏಕಮುಖ ಸಂಚಾರದ ತೆಕ್ಕೆಗೆ ಸಿಲುಕಿದ್ದ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ನೃಪತುಂಗ ರಸ್ತೆಯಲ್ಲಿ ನ.14ರಿಂದ ದ್ವಿಮುಖ ಸಂಚಾರ ಆರಂಭವಾಗಲಿದೆ. ಇದು ಮಕ್ಕಳ ದಿನಾಚರಣೆ ಕೊಡುಗೆಯೂ ಅಲ್ಲ, ದೀಪಾವಳಿ ಉಡುಗೊರೆಯೂ ಅಲ್ಲ ನಗರ ಪೊಲೀಸ್ ಕಮೀಷನರ್ ಎಚ್.ಟಿ. ಸಾಂಗ್ಲಿಯಾನಾರ ಕೊಡುಗೆ.
ಆಗಸ್ಟ್ 26ರಿಂದ ಜಾರಿಗೆ ಬಂದಿದ್ದ ಏಕಮುಖ ಸಂಚಾರ ವ್ಯವಸ್ಥೆಯನ್ನು ಸಾರ್ವಜನಿಕರ ಬೇಡಿಕೆಯ ಮೇಲೆ ರದ್ದು ಪಡಿಸಿ, ಮತ್ತೆ ದ್ವಿಮುಖ ಸಂಚಾರ ವ್ಯವಸ್ಥೆ ಜಾರಿಗೆ ತಂದಿರುವುದಾಗಿ ಸಾಂಗ್ಲಿಯಾನ ತಿಳಿಸಿದ್ದಾರೆ. ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಹೋಗುವ ರೋಗಿಗಳು, ವಿಧಾನಸೌಧ, ನ್ಯಾಯಾಲಯ ಹಾಗೂ ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಮತ್ತು ಸಿಬ್ಬಂದಿಗೆ ಏಕಮುಖ ಸಂಚಾರ ವ್ಯವಸ್ಥೆಯಿಂದ ಉಂಟಾಗಿದ್ದ ತೊಂದರೆ ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೃಪತುಂಗ ರಸ್ತೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಜಾರಿಗೆ ತಂದಿದ್ದರೂ, ಪೊಲೀಸ್ ಕಾರ್ನರ್ನಿಂದ ಕೆ.ಆರ್.ವೃತ್ತದ ಕಡೆಗೆ (ನೃಪತುಂಗ ರಸ್ತೆಯಲ್ಲಿ ) ಕೇವಲ ದ್ವಿಚಕ್ರವಾಹನಗಳು ಮತ್ತು ಲಘು ಮೋಟಾರು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಆದರೆ, ಅದರ ವಿರುದ್ಧ ದಿಕ್ಕಿನಲ್ಲಿ ಅಂದರೆ ಕೆ.ಆರ್. ವೃತ್ತದಿಂದ ಪೊಲೀಸ್ ಕಾರ್ನರ್ ಕಡೆಗೆ ಬಿಎಂಟಿಸಿ ಬಸ್ಗಳು, ತಳ್ಳುವ ಗಾಡಿಗಳು, ಜಟಕಾಬಂಡಿ, ಎತ್ತಿನಗಾಡಿಗಳೂ ಸಂಚರಿಸಬಹುದಾಗಿದೆ. ನೃಪತುಂಗ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆಯನ್ನು ನವೆಂಬರ್ 14ರಿಂದ ಸಂಪೂರ್ಣ ನಿಷೇಧಿಸಲಾಗಿದೆ ಎಂದೂ ಸಾಂಗ್ಲಿಯಾನ ತಿಳಿಸಿದ್ದಾರೆ.
ಮುಖಪುಟ / ಸಾಂಗ್ಲಿಯಾನ ವಾಚ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications