ಹಳ್ಳಿಗಾಡಿಗೂ ಹೈಟೆಕ್ ಶಿಕ್ಷಣ! ಉಪಗ್ರಹ ಶಿಕ್ಷಣ ಜಾಲಕ್ಕೆ ಚಾಲನೆ
ಬೆಂಗಳೂರು : ದೇಶದ ಹಿಂದುಳಿದ ಪ್ರದೇಶಗಳಲ್ಲೂ ಉಪಗ್ರಹದ ಮೂಲಕ ಅತ್ಯಾಧುನಿಕ ಶಿಕ್ಷಣವನ್ನು ಸುಲಭವಾಗಿ ಪಡೆಯಬಹುದಾದ ದೂರಶಿಕ್ಷಣ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಗುರುವಾರ ಸಾಂಕೇತಿಕವಾಗಿ ಉದ್ಘಾಟಿಸಿದರು.
ಸಿಂಗಪುರ್ ಮೂಲದ ಸ್ಕೈಸ್ಯಾಟ್ ಹೋಲ್ಡಿಂಗ್ಸ್ ಹಾಗೂ ಹಿಂದೂಸ್ತಾನ್ ಟೆಕ್ನಾಲಜೀಸ್ ಲಿಮಿಟೆಡ್(ಎಚ್ಟಿಎಲ್) ರೂಪಿಸಿರುವ ಈ ದೂರಶಿಕ್ಷಣ ಜಾಲ ಪ್ರಸ್ತುತ 100 ಕೇಂದ್ರಗಳು ಹಾಗೂ 15 ಸಾವಿರ ವಿದ್ಯಾರ್ಥಿಗಳನ್ನು ಹೊಂದಿದೆ. ಎಚ್ಟಿಎಲ್- ಸ್ಕೈಸ್ಯಾಟ್ನೊಂದಿಗೆ ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ಮಣಿಪಾಲ್ ಗ್ರೂಪ್ಸ್ ಉಪಗ್ರಹ ಮೂಲಕ ದೂರಶಿಕ್ಷಣ ಕಾರ್ಯಕ್ರಮದಲ್ಲಿ ಕೈ ಜೋಡಿಸಿದೆ.
ಮುಂದಿನ ವರ್ಷದ ಮಧ್ಯದ ವೇಳೆಗೆ ಈ ಶಿಕ್ಷಣ ಜಾಲವು 250 ಕೇಂದ್ರಗಳು ಹಾಗೂ 38 ಸಾವಿರ ವಿದ್ಯಾರ್ಥಿಗಳನ್ನು ಒಳಗೊಳ್ಳುವ ಗುರಿ ಹೊಂದಿದೆ. ನಂತರದ ದಿನಗಳಲ್ಲಿ ಈ ಶಿಕ್ಷಣ ಜಾಲವು ಸ್ವಂತ ಉಪಗ್ರಹ ಹೊಂದುವುದೆಂದು ಎಚ್ಟಿಎಲ್ನ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಹರನ್ ಮೋಸಸ್ ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರ ಸ್ಟುಡಿಯೋದ ಮೂಲಕ ಉಪನ್ಯಾಸ ನೀಡುವ ಉಪನ್ಯಾಸಕನ ಚಿತ್ರ ಹಾಗೂ ಧ್ವನಿ ದೇಶದ ವಿವಿಧ ಮೂಲೆಗಳಲ್ಲಿನ ಕೇಂದ್ರಗಳಲ್ಲಿ ಉಪಗ್ರಹದ ಮೂಲಕ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ . ಮಾನಿಟರ್ ಮೂಲಕ ಉಪನ್ಯಾಸವನ್ನು ವಿದ್ಯಾರ್ಥಿಗಳು ನೋಡಬಹುದು. ಸಂದೇಹಗಳಿದ್ದಲ್ಲಿ ನೇರವಾಗಿ ಪ್ರಶ್ನೆ ಕೇಳಬಹುದು. ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ನೇರ ಸಂವಾದವೂ ಸಾಧ್ಯ ಎಂದು ಮನೋಹರನ್ ತಿಳಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications