ಮಕ್ಕಳ ಶಿಕ್ಷಣಕ್ಕೆ ಎಂಥ ಪರಿಸರ ಸರಿ? ಪ್ರೊ.ಎಸ್.ಗೋಪಾಲ್ ಪ್ರಕಾರ..
ಮಂಗಳೂರು : ಯಾವುದೇ ಒತ್ತಡಗಳಿಲ್ಲದ ಸಹಜ ವಾತಾವರಣದಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಇವತ್ತಿನ ಆಧುನಿಕ ವಿಜ್ಞಾನ ಯುಗದಲ್ಲಿ ಹೆಚ್ಚು ಪರಿಣಾಮಕಾರಿಯಾದ ಶಿಕ್ಷಣ ಕ್ರಮವಾಗಿದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಎಸ್. ಗೋಪಾಲ್ ಹೇಳಿದ್ದಾರೆ.
ಅಕ್ಷರ ಎಂಬ ಮಾಂಟೆಸ್ಸರಿ ಸ್ಕೂಲ್ ಆಫ್ ಚಿಲ್ಡ ್ರನ್ ನರ್ಸರಿ ಶಾಲೆಯನ್ನು ಮಕ್ಕಳ ದಿನಾಚರಣೆಯಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯೇನಪೋಯ ಸೆಂಟರ್ ಈ ನರ್ಸರಿ ಶಾಲೆಯನ್ನು ಆರಂಭಿಸುತ್ತಿದೆ.
ವಿಜ್ಞಾನದ ಮೂಲಕ ತಂತ್ರಜ್ಞಾನದ ಅಭಿವೃದ್ಧಿಯಾಗುತ್ತದೆ. ಆದರೆ ಇವತ್ತು ಅಗತ್ಯವಾಗಿರುವುದು ಮನುಕುಲ ಶಾಂತಿಯನ್ನು ಹರಡುವ ಶಿಕ್ಷಣ. ಜಗತ್ತಿನಲ್ಲಿ ಹಿಂಸೆ ಹೆಚ್ಚುತ್ತಿದೆ. ಶೈಕ್ಷಣಿಕ ವಲಯದಲ್ಲಿ ನೈತಿಕ ಶಿಕ್ಷಣದ ಕೊರತೆಯೇ ಇದಕ್ಕೆ ಕಾರಣ ಎಂದು ಗೋಪಾಲ್ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭುವನೇಶ್ವರದ ಶಿಕ್ಷಣ ತಜ್ಞ ಅಮುಕ್ತ ಮಹಾಪತ್ರ ಅವರು, ನರ್ಸರಿ ಶಿಕ್ಷಣದ ಪ್ರಾಮುಖ್ಯತೆಯನ್ನು ವಿವರಿಸಿದರು. ಮಕ್ಕಳ ಆಶೋತ್ತರಗಳನ್ನು ಪ್ರೋತ್ಸಾಹಿಸಬೇಕೇ ಹೊರತು ಅದುಮಿಡುವಂತೆ ಗದರಬಾರದು. ಆಗ ಮಕ್ಕಳಲ್ಲಿನ ಸುಪ್ತ ಪ್ರತಿಭೆ ಬೆಳಕಿಗೆ ಬರುತ್ತದೆ. ಈ ನಿಟ್ಟಿನಲ್ಲಿ ಮಾಂಟೆಸ್ಸರಿ ಶಿಕ್ಷಣ ಪೂರಕವಾದುದು ಎಂದು ಅಮುಕ್ತ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications