ಯಾತ್ರಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗೊಂಡಿದೆ ಶಬರಿಮಲೆ
ತಿರುವನಂತಪುರ: ಇದು ಕಾರ್ತೀಕ. ಕಾರ್ತೀಕ ಮಾಸ ಬಂದರೆ, ಶಬರಿಗಿರಿಯಲ್ಲಿ ಸಂಭ್ರಮ- ಸಡಗರ. ಅಯ್ಯಪ್ಪನ ಕಾಣಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸುವುದೇ ಈ ಮಾಸದಿಂದಲೇ. ಈಗಾಗಲೇ ಮಾಲೆತೊಟ್ಟಿರುವ - ತೊಡುತ್ತಿರುವ ಸಾವಿರಾರು ಭಕ್ತರು ಶಬರಿಮಲೆಗೆ ತೆರಳಲು ಸಜ್ಜಾಗಿದ್ದಾರೆ.
ಶಬರಿಮಲೆಗೆ ಆಗಮಿಸುವ ಯಾತ್ರಾರ್ಥಿಗಳನ್ನು ಸ್ವಾಗತಿಸಲು ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರೇಕ್ಷಣೀಯ/ಪುಣ್ಯ ಕ್ಷೇತ್ರಗಳೂ ಸಜ್ಜಾಗಿವೆ. ಈ ವಿಷಯವನ್ನು ಕೇರಳ ರಾಜ್ಯ ಸಾಂಸ್ಕೃತಿಕ ಮತ್ತು ಮುಜರಾಯಿ ಖಾತೆ ಸಚಿವ ಜಿ. ಕಾರ್ತಿಕೇಯನ್ ಸುದ್ದಿಗಾರರಿಗೆ ಇಲ್ಲಿ ತಿಳಿಸಿದ್ದಾರೆ.
ಶಬರಿಗಿರಿಯ ಅಯ್ಯಪ್ಪನ ದರ್ಶನಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಪ್ರತಿವರ್ಷ ಶೇ.25ರಷ್ಟು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಯಾತ್ರಾರ್ಥಿಗಳಿಗೆ ತಾತ್ಕಾಲಿಕ ವಸತಿಕೇಂದ್ರ ನಿರ್ಮಿಸಿಕೊಳ್ಳಲು ಕೇಂದ್ರವು ದೇವಾಲಯಕ್ಕೆ 22.76 ಹೆಕ್ಟೇರ್ ಅರಣ್ಯಭೂಮಿ ನೀಡಿದೆ.
ಈ ಸೀಸನ್ನಲ್ಲಿ ಪಂಪಾನದಿ ನೀರು ಮಲಿನವಾಗದಂತೆ ನೋಡಿಕೊಳ್ಳಲು ನಿರ್ಮಿಸುತ್ತಿರುವ ಕೊಳಚೆ ನಿಯಂತ್ರಣ ಘಟಕದ ಮೊದಲ ಹಂತ ನ.15ರ ಗುರುವಾರದ ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದೂ ಸಚಿವರು ತಿಳಿಸಿದ್ದಾರೆ. ಕಳೆದ ವರ್ಷ ಜನರ ನೂಕುನುಗ್ಗಲಿನಿಂದ ಕುಸಿದಿದ್ದ ಮರ್ರಕೂಟಂ ಬಳಿ ಶಾಶ್ವತ ತಡೆಗಟ್ಟೆಗಳನ್ನೂ ನಿರ್ಮಿಸಲಾಗುತ್ತಿದೆ.
ಜನರ ಅನುಕೂಲಕ್ಕಾಗಿ ತಾತ್ಕಾಲಿಕ ಮೇಲು ಸೇತುವೆಗಳನ್ನು ಸಹ ನಿರ್ಮಿಸಲಾಗುವುದು. ಪಂಪಾನದಿಯಿಂದ ಗುಡ್ಡದ ತುದಿಯವರೆಗಿನ ಮಾರ್ಗದಲ್ಲಿ ಹೆಚ್ಚುವರಿ ವೈದ್ಯರ ಜೊತೆ ಆರೋಗ್ಯ ಕೇಂದ್ರಗಳನ್ನ ಸ್ಥಾಪಿಸಲಾಗುವುದು. ಮಾರ್ಗದಲ್ಲಿ ಇನ್ನೊಂದು ಹೃದ್ರೋಗ ಕೇಂದ್ರವನ್ನು ಸಹ ತೆರೆಯಲಾಗುವುದು ಎಂದು ಅವರು ಹೇಳಿದರು.
(ಪಿ.ಟಿ.ಐ/ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications