ಸಮಗ್ರ ಕನ್ನಡ ಸಾಫ್ಟ್ವೇರ್ ಅಭಿವೃದ್ಧಿಗೊಂದು ಕ್ರಿಯಾಯೋಜನೆ
ಬೆಂಗಳೂರು : ರಾಜ್ಯದ ಆಡಳಿತ ಯಂತ್ರದಲ್ಲಿ ಬಳಸಲು ಅನುಕೂಲವಾಗುವಂತೆ ಸಮಗ್ರ ಕನ್ನಡ ಸಾಫ್ಟ್ವೇರ್ ಅಭಿವೃದ್ಧಿಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕ್ರಿಯಾ ಯೋಜನೆಯಾಂದನ್ನು ರೂಪಿಸಿದೆ.
ಪ್ರಾಧಿಕಾರದ ಜೊತೆಗೆ ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆಯು ಈ ಯೋಜನೆಯ ಜವಾಬ್ದಾರಿಯನ್ನು ಹಂಚಿಕೊಂಡಿದೆ. ಪ್ರಾಧಿಕಾರವು ಇದನ್ನು ಆಡಳಿತಕ್ಕೆ ಮಾತ್ರ ಸೀಮಿತಗೊಳಿಸದೆ, ಲೈಬ್ರರಿ, ಉದ್ಯಮ ವ್ಯವಹಾರ, ಅನುವಾದ ಕಾರ್ಯ ಮತ್ತು ಶಿಕ್ಷಣ ಸಂಸ್ಥೆಗಳಿಗೂ ಈ ಯೋಜನೆಯಿಂದ ಪ್ರಯೋಜನವಾಗುವಂತೆ ಮಾಡಲಿದೆ. ಸಾಮಾನ್ಯ ಕನ್ನಡ ಸಾಫ್ಟ್ವೇರ್ ಒಂದನ್ನು ತಯಾರಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇದರಿಂದ ಪ್ರಸ್ತುತ ಇರುವ ಬರಹ, ಶ್ರೀಲಿಪಿ, ಆಕೃತಿ ಮತ್ತಿತರ ಸಾಫ್ಟ್ವೇರ್ಗಳನ್ನು ಬಳಸುವವರಿಗೆ ಉಪಯೋಗವಾಗಲಿದೆ.
ಸಂಶೋಧನೆ ಮಾತ್ರವಲ್ಲದೆ ದೈನಂದಿನ ಕಾರ್ಯಗಳಿಗೂ ಕಂಪ್ಯೂಟರ್ನ್ನು ಬಳಸುತ್ತಿರುವ ಈ ಸಂದರ್ಭದಲ್ಲಿ ಕನ್ನಡಕ್ಕೂ ಈ ಅವಕಾಶದ ಅಗತ್ಯವಿದೆ. ಅಪಾರ ಪ್ರಮಾಣದ ಮಾಹಿತಿಯನ್ನು ಸಂಗ್ರಹಿಸಬಲ್ಲ ಕಂಪ್ಯೂಟರ್ನಲ್ಲಿ ವಿಶ್ವ ಕೋಶ, ನಿಘಂಟುಗಳನ್ನು ಅಳವಡಿಸಿ, ಡೇಟಾ ಬ್ಯಾಂಕ್ ನಿರ್ಮಿಸಲಾಗುವುದು ಎಂದು ಬರಗೂರು ಹೇಳಿದ್ದಾರೆ.
ಕಂಪ್ಯೂಟರ್ನಲ್ಲಿ ಆನ್ವಯಿಕ ಸಾಫ್ಟ್ವೇರ್ನ್ನು ತಯಾರಿಸಿ ಸಾಮಾನ್ಯ ಆಡಳಿತದಲ್ಲಿ ಅಳವಡಿಸಿಕೊಳ್ಳುವುದೂ ಮುಖ್ಯ. ಇಂಥ ಸಾಫ್ಟ್ವೇರ್ಗಳನ್ನು ತಯಾರಿಸಿ ಎಲ್ಲ ಸರಕಾರಿ ಕಚೇರಿಗಳಿಗೆ ಉಚಿತವಾಗಿ ನೀಡಲಾಗುವುದು. ನೌಕರರ ರಜೆ ವಿವರ, ಸಂಬಳದಂತಹ ವಿಷಯಗಳನ್ನು ಕಂಪ್ಯೂಟರ್ನಲ್ಲಿ ಸಂಗ್ರಹಿಸಿಡಲಾಗುವುದು. ಕನ್ನಡ ಲಿಪಿ ಸಾಫ್ಟ್ವೇರ್ ಯೂನಿಕೋಡ್, ಅಕಾರಾದಿ ವಿಂಗಡಣೆ, ಪರಿವಿಡಿ (ಇಂಡೆಕ್ಸಿಂಗ್), ವ್ಯಾಕರಣ ಮತ್ತು ಕನ್ನಡ ಪದ ಪರೀಕ್ಷೆಗಳನ್ನು ಅಳವಡಿಸುವುದು ಹಾಗೂ ಅನುವಾದ ತಂತ್ರಾಂಶಗಳನ್ನೂ ಸಿದ್ಧಪಡಿಸುವ ಕಾರ್ಯ ಈ ಕ್ರಿಯಾ ಯೋಜನೆಯಲ್ಲಿದೆ ಎಂದು ಬರಗೂರು ತಿಳಿಸಿದ್ದಾರೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications