Get Updates
Get notified of breaking news, exclusive insights, and must-see stories!

ಸಾಹಿತಿ, ರಾಜಕಾರಣಿ, ಪತ್ರಕರ್ತ ಮಹದೇವ ಬಣಕಾರ್‌ ನಿಧನ

ಬೆಂಗಳೂರು : ಮಾಜಿ ಶಾಸಕ, ಜಾನಪದ ಸಾಹಿತಿ, ನಾಟಕಕಾರ ಮಹದೇವ ಬಣಕಾರ್‌ ಅವರು ಶನಿವಾರ ಮಧ್ಯಾಹ್ನ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಬಣಕಾರ್‌ ಅವರಿಗೆ ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ರಾತ್ರಿ ದಾವಣಗೆರೆಯಿಂದ ಕರೆತಂದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಭಾನುವಾರ ಮಧ್ಯಾಹ್ನ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕು ಮೊಟೆ ಬೆನ್ನೂರಿನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಸಾಹಿತ್ಯದ ಜೊತೆಗೆ ರಾಜಕೀಯ ರಂಗದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದ ಬಣಕಾರ್‌ 1967ರಲ್ಲಿ ಬ್ಯಾಡಗಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಅವರ ಆಡಳಿತಾವಧಿಯಲ್ಲಿ ವಿಧಾನಪರಿಷತ್‌ ಸದಸ್ಯರೂ ಆಗಿದ್ದರು. ಕಥೆ, ಕಾವ್ಯ, ನಾಟಕ, ವಚನ ಹೀಗೆ ನಾನಾ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ನಡೆಸಿದ್ದ ಅವರು, ಬಣಕಾರರ ವಚನಗಳು ಎಂಬ 1108 ವಚನಗಳ ಬೃಹತ್‌ ಗ್ರಂಥವನ್ನೂ ರಚಿಸಿದ್ದರು.

ಭಾಮಿನಿ ಷಟ್ಪದಿಯಲ್ಲಿ ಮರಳು ಸಿದ್ದಯ್ಯನ ಜೀವನ ಚರಿತ್ರೆ, ವಚನದೀಪ್ತಿ, ಕಾವ್ಯೋದಯ, ಬಣ್ಣದ ಕಾರಂಜಿ, ಅಪರಂಜಿ ಮುಂತಾದ 80ಕ್ಕೂ ಹೆಚ್ಚು ಕೃತಿಗಳನ್ನು ಬಣಕಾರ್‌ ರಚಿಸಿದ್ದರು. ಪತ್ರಕರ್ತರಾಗಿಯೂ ಕೆಲಕಾಲ ಸೇವೆ ಸಲ್ಲಿಸಿದ್ದ ಅವರು, ಹಲವು ಪತ್ರಿಕೆಗಳಿಗೆ ಅಂಕಣಕಾರರಾಗಿಯೂ ಸೇವೆ ಸಲ್ಲಿಸಿದ್ದರು.

ಸಂತಾಪ: ಹಿರಿಯ ಲೇಖಕ, ರಾಜಕಾರಣಿ ಮಹದೇವ ಬಣಕಾರ್‌ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ , ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಸಚಿವರಾದ ಡಿ.ಬಿ. ಚಂದ್ರೇಗೌಡ, ಆರ್‌.ವಿ. ದೇಶಪಾಂಡೆ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

(ಇನ್‌ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+