‘ಸಿಬಿಐ ಮೋಹ ಬಿಡಿ, ಸಾಂಗ್ಲಿಯಾನ ಮೇಲೆ ನಂಬಿಕೆಯಿಡಿ’
ಬೆಂಗಳೂರು : ನಕಲಿ ಸ್ಟಾಂಪ್ ಪೇಪರ್ ಜಾಲವನ್ನು ಪತ್ತೆ ಹಚ್ಚುವ ತನಿಖೆಯನ್ನು ಸಿಬಿಐಗೆ ವಹಿಸಿಕೊಡುವ ಬದಲು ಬೆಂಗಳೂರು ಪೊಲೀಸರಿಗೇ ವಹಿಸಿಕೊಡಬೇಕೆಂದು ವಿಧನ ಪರಿಷತ್ತಿನ ಪ್ರತಿಪಕ್ಷಗಳ ನಾಯಕ ಹಾಗೂ ಜಾತ್ಯತೀತ ಜನತಾದಳದ ಹಿರಿಯ ಮುಖಂಡ ಕೆ.ಎಚ್.ಶ್ರೀನಿವಾಸ್ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಒತ್ತಾಯಿಸಿದ್ದಾರೆ.
ನಕಲಿ ಸ್ಟಾಂಪ್ ಪೇಪರ್ ತನಿಖೆಯನ್ನು ಸಿಬಿಐಗೆ ವಹಿಸಿಕೊಡುವುದರಲ್ಲಿ ಯಾವುದೇ ಅರ್ಥವಿಲ್ಲ . ಬೆಂಗಳೂರು ಪೊಲೀಸ್ ಆಯುಕ್ತ ಎಚ್.ಟಿ.ಸಾಂಗ್ಲಿಯಾನ ಅವರಲ್ಲಿ ನನಗೆ ಸಂಪೂರ್ಣ ವಿಶ್ವಾಸವಿದೆ. ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಿದರೆ ಅಪರಾಧಿಗಳನ್ನು ಸಾಂಗ್ಲಿಯಾನ ಬಯಲಿಗೆಳೆಲು ಸಮರ್ಥರು ಎಂದು ಶ್ರೀನಿವಾಸ್ ಹೇಳಿದರು.
ಕೆಲವು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಗಳು ಸಚಿವರೊಬ್ಬರಿಗೆ ಸಂಬಂಧಿಸಿದ ವ್ಯಕ್ತಿಯಾಬ್ಬ ನಕಲಿ ಸ್ಟಾಂಪ್ ಪೇಪರ್ ಜಾಲದಲ್ಲಿ ಭಾಗಿಯಾಗಿರುವ ಗುಮಾನಿಯಿದೆ. ಆ ಕಾರಣದಿಂದಾಗಿಯೇ ಪ್ರಕರಣದ ಬಗೆಗಿನ ತನಿಖೆ ನಡೆಸುವಂತೆ ಸಿಬಿಐನ್ನು ಕೇಳುವಂತೆ ಮುಖ್ಯಮಂತ್ರಿ ಕೃಷ್ಣ ಅವರನ್ನು ಸಾಂಗ್ಲಿಯಾನ ಕೇಳಿಕೊಂಡಿರುವುದಾಗಿ ತಿಳಿದುಬಂದಿದೆ. ಆದರೆ, ಪ್ರಕರಣವನ್ನು ಸಿಬಿಐಗೆ ವಹಿಸಿಕೊಟ್ಟರೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಂತಾಗುತ್ತದೆ ಎಂದು ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಸ್ಟಾಂಪ್ ಪೇಪರ್ ಜಾಲದಲ್ಲಿ ಹೆಸರು ಕೇಳಿಬರುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಹಾಗೂ ಸಂಬಂಧಿಸಿದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಕೃಷ್ಣ ಅವರನ್ನು ಶ್ರೀನಿವಾಸ್ ಒತ್ತಾಯಿಸಿದರು.
(ಪಿಟಿಐ)
ಮುಖಪುಟ / ಸಾಂಗ್ಲಿಯಾನ ವಾಚ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications