ಭಾಷಣ ಮಾಡುವಾಗಲೇ ಹೃದಯಾಘಾತ, ಸ್ವಾತಂತ್ರ್ಯಯೋಧನ ಸಾವು
ಬೆಂಗಳೂರು : ದಲಿತರಿಗೆ ಮತ್ತು ಹಿಂದುಳಿದವರಿಗಾಗಿ ನನ್ನ ಕೊನೇ ಉಸಿರಿರುವವರೆಗೆ ಹೋರಾಡುತ್ತೇನೆ ಎಂದು ವೇದಿಕೆಯಲ್ಲಿ ಭಾಷಣ ಮಾಡುತ್ತಿರುವಂತೆಯೇ ಹಿರಿಯ ಸ್ವಾತಂತ್ರ್ಯ ಸೇನಾನಿ ಅನಂತಯ್ಯ ಮಿತ್ರ ಅವರು ಕುಸಿದು ಬಿದ್ದು ಮೃತರಾದ ಘಟನೆ ಭಾನುವಾರ ನಡೆದಿದೆ.
ನಗರದ ಯವನಿಕಾ ಸಭಾಂಗಣದಲ್ಲಿ ‘ದೇವರಾಜ ಅರಸು ಮತ್ತು ಹಿಂದುಳಿದ ವರ್ಗಗಳು’ ಎಂಬ ವಿಷಯದ ಬಗ್ಗೆ ದಲಿತ ಮತ್ತು ಅಲ್ಪ ಸಂಖ್ಯಾತರ ಜಂಟಿ ಕ್ರಿಯಾ ಸಮಿತಿ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಅನಂತಯ್ಯ ಭಾಷಣ ಮಾಡುತ್ತಿದ್ದರು.
‘ಹಿಂದುಳಿದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಗೋವಾ ಸತ್ಯಾಗ್ರಹಿಗಳಿಗೆ ಇನ್ನೂ ಪಿಂಚಣಿ ಲಭಿಸುತ್ತಿಲ್ಲ. ಇದಕ್ಕಾಗಿ ನಾನು ನಿರಂತರವಾಗಿ ಹೋರಾಡಲು ಸಿದ್ಧ. ಹಿಂದುಳಿದವರಿಗಾಗಿ ನನ್ನ ಕೊನೇ ಉಸಿರು ಇರುವವರೆಗೂ ಹೋರಾಟ ನಡೆಸುತ್ತೇನೆ ಎಂಬ ಮಾತುಗಳನ್ನು ಮುಗಿಸುತ್ತಲೇ ಅನಂತಯ್ಯ ಆಯಾಸಗೊಂಡು ಮಾತು ನಿಲ್ಲಿಸಿ ಕುಸಿದು ಬಿದ್ದರು.
ತಕ್ಷಣ ಜಂಟಿ ಕ್ರಿಯಾ ಸಮಿತಿಯ ಸದಸ್ಯ ಹಾಗೂ ಅನಂತಯ್ಯ ಅವರ ಪುತ್ರ ಡಾ. ಗೋಪಾಲ ಕೃಷ್ಣ ಮಿತ್ರ ಅವರು ವೇದಿಕೆಗೆ ಧಾವಿಸಿ ಬಂದು, ತಮ್ಮ ತಂದೆಗೆ ಹೃದಯಾಘಾತವಾಗಿರುವುದನ್ನು ಖಚಿತಪಡಿಸಿಕೊಂಡರು. ಹತ್ತಿರದ ಮಾರ್ತಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅನಂತಯ್ಯ ಅವರ ಇಹ ಲೋಕ ಯಾತ್ರೆ ಮುಗಿದಿತ್ತು.
ಗೋವಾ ಸತ್ಯಾಗ್ರಹಿಗಳಿಗೆ ಪಿಂಚಣಿ ಒದಗಿಸಲು ಅನಂತಯ್ಯ ಕಳೆದ ಹಲವು ವರ್ಷಗಳಿಂದ ಶ್ರಮಿಸುತ್ತಲೇ ಇದ್ದರು. ತುರ್ತು ಪರಿಸ್ಥಿತಿ, ಸ್ವಾತಂತ್ರ್ಯ ಹೋರಾಟ, ಭಾರತ ಸೇವಾದಳ, ಗೋವಾ ವಿಮೋಚನಾ ಚಳವಳಿಯಲ್ಲಿ ಅನಂತಯ್ಯ ಅವರು ಸಕ್ರಿಯವಾಗಿ ಭಾಗವಹಿಸಿದ್ದರು.
70 ವರ್ಷ ವಯಸ್ಸಿನ ಅನಂತಯ್ಯ ಅವರ ಅಂತ್ಯ ಕ್ರಿಯೆ ಅವರ ಹುಟ್ಟೂರು ತುಮಕೂರಿನ ಚಿಕ್ಕನಾಯಕನ ಹಳ್ಳಿಯಲ್ಲಿ ಸೋಮವಾರ ನಡೆಯಲಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications