ಸಮುದಾಯದ ಭಾಷೆ ಉಳಿಸಲು ನಾಟಕ ಅಗತ್ಯ-ಬಿ.ವಿ.ಕಾರಂತ
ಮೈಸೂರು : ನಾಟಕವನ್ನು ಪಠ್ಯದಲ್ಲಿ ಅಳವಡಿಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು ಎಂದು ಪ್ರಸಿದ್ಧ ರಂಗ ನಿರ್ದೇಶಕ ಬಿ.ವಿ. ಕಾರಂತ ಸಲಹೆ ಮಾಡಿದ್ದಾರೆ.
ಮೈಸೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ರಂಗಾಯಣ ಹಮ್ಮಿ ಕೊಂಡಿರುವ ಅಕ್ಕ ರಾಷ್ಟ್ರೀಯ ಮಹಿಳಾ ನಾಟಕೋತ್ಸವದ ಉದ್ಘಾಟನಾ ಸಮಾರಂಭವದಲ್ಲಿ ಅವರು ಭಾನುವಾರ ಮಾತನಾಡುತ್ತಿದ್ದರು. ಜನಸಮುದಾಯದ ನಡುವೆ ಭಾಷೆ ಯನ್ನು ಉಳಿಸಿ ಬೆಳೆಸಲು ರಂಗಭೂಮಿ ಒಂದು ಒಳ್ಳೆಯ ಸಾಧನ. ಮನುಷ್ಯನಿಗೆ ಅರಿವನ್ನು ಮೂಡಿಸುವ ಮತ್ತು ಬೌದ್ಧಿಕ ವಿಕಾಸಕ್ಕೆ ಶ್ರಮಿಸುವ ನಿಕಟ ಮಾಧ್ಯಮ ನಾಟಕವಾಗಿದೆ. ಒಂದು ಸಮುದಾಯಕ್ಕೆ ಶಿಕ್ಷಣ ನೀಡಲು ಹೇಗೆ ಶಾಲೆಗಳು ಸಹಕಾರಿಯಾಗುತ್ತದೋ ಹಾಗೆಯೇ ಕಲಾ ಪ್ರಕಾರವನ್ನು ಅಭಿವೃದ್ಧಿಗೊಳಿಸಲು ರೆಫರ್ಟರಿಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಕಾರಂತರು ಅಭಿಪ್ರಾಯಪಟ್ಟರು.
ನಾಟಕೋತ್ಸವವನ್ನು ಉದ್ಘಾಟಿಸಿದ ಪ್ರಖ್ಯಾತ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿಂದಿ ಲೇಖಕಿ ಕೃಷ್ಣಾ ಸೋಬ್ತಿ ಅವರು ಮಾತನಾಡಿ ಸಮಾಜದಲ್ಲಿನ ಗಂಭೀರ ಸಮಸ್ಯೆಗಳನ್ನು ಬಿಂಬಿಸುವ ನಾಟಕಗಳಲ್ಲಿ ರಚನಾತ್ಮಕ ಸಂಯೋಜನೆಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ 12ನೇ ಶತಮಾನದಲ್ಲಿ ಸ್ತ್ರೀ ಸಮಾನತೆಗಾಗಿ ಹೋರಾಡಿದ ಅಕ್ಕಮಹಾದೇವಿಯ ಸಾಮಾಜಿಕ ಪರಿಕಲ್ಪನೆಯ ಒಂದಂಗವೇ ಈ ಮಹಿಳಾ ನಾಟಕೋತ್ಸವ ಎಂದು ಹೇಳಿದರು.
ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಭೂಮಿಗೀತ ರಂಗಮಂದಿರದಲ್ಲಿ , ಕೃಷ್ಣಾ ಸೋಬ್ತಿಯವರ ‘ಎ ಲಡ್ಕಿ’ ನಾಟಕದೊಂದಿಗೆ ಎಂಟು ದಿನಗಳ ರಾಷ್ಟ್ರೀಯ ನಾಟಕೋತ್ಸವ ಆರಂಭವಾಯಿತು. ಇದೇ ಸಂದರ್ಭದಲ್ಲಿ ಸಮಗ್ರ ರಂಗ ಮಂದಿರವನ್ನು ಸಚಿವೆ ರಾಣಿ ಸತೀಶ್ ನಾಡಿಗರ್ಪಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications