Get Updates
Get notified of breaking news, exclusive insights, and must-see stories!

ತಮಿಳುನಾಡಲ್ಲಿ ಗುಟ್ಕಾ ನಿಷೇಧ, ಕರ್ನಾಟಕದಲ್ಲಿ ಯಾವಾಗ ಕೃಷ್ಣ?

ಚೆನ್ನೈ: ದೇಶಾದ್ಯಂತ ಧೂಮಪಾನ ನಿಷೇಧಿಸಿ ಸುಪ್ರೀಂ ಕೋರ್ಟ್‌ ಆಜ್ಞೆ ಹೊರಡಿಸಿರುವ ಬೆನ್ನಿಗೇ ತಮಿಳುನಾಡು ಸರಕಾರ ರಾಜ್ಯದಲ್ಲಿ ಪಾನ್‌ ಮಸಾಲಾ, ಜಗಿಯುವ ತಂಬಾಕು ಮತ್ತು ಗುಟ್ಕಾವನ್ನು ನಿಷೇಧಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೋಮವಾರ ಆಜ್ಞೆ ಹೊರಡಿಸಿದೆ.

ಈ ನಿಷೇಧಾಜ್ಞೆ ಐದು ವರ್ಷಗಳ ಕಾಲ ಜಾರಿಯಲ್ಲಿರುತ್ತದೆ. ಸಾರ್ವಜನಿಕ ಆರೋಗ್ಯ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ. ಅಧ್ಯಯನ ವರದಿಗಳ ಪ್ರಕಾರ ಎಲ್ಲ ತಂಬಾಕು ಪದಾರ್ಥಗಳು ಬಾಯಿಯ ಕ್ಯಾನ್ಸರ್‌ ತರುತ್ತವೆ ಎಂಬುದನ್ನು ಸಾಬೀತು ಮಾಡಿವೆ. ಆದ್ದರಿಂದ ತಂಬಾಕಿನಂಶ ಇರುವ ಪದಾರ್ಥಗಳನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಎಸ್‌. ಸೆಮ್ಮಾಲೈ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಜನತೆ ಈ ನಿಷೇಧವನ್ನು ಸ್ವಾಗತಿಸಬಹುದೆಂಬ ನಂಬಿಕೆ ನಮಗಿದೆ. ದೇಶದಲ್ಲಿ ಮುಕ್ಕಾಲು ಭಾಗ ಮಂದಿ ತಂಬಾಕು ಜಗಿಯುವುದರಿಂದಲೇ ಬಾಯಿಯ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿದ್ದಾರೆ. ಇವರೆಲ್ಲ 35 ವರ್ಷಕ್ಕಿಂತ ಕಡಿಮೆ ಪ್ರಾಯದವರು ಎಂದು ಅಧ್ಯಯನ ವರದಿ ಹೇಳುತ್ತದೆ. ಈ ಅನಿರೀಕ್ಷಿತ ಆಜ್ಞೆಯನ್ನು ಜಾರಿ ತರುವ ನಿಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ನಿರ್ದೇಶಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಸೆಮ್ಮಾಲೈ ಹೇಳಿರುವುದಾಗಿ ನಮ್ಮ ಚೆನ್ನೈ ಕಾರ್ಯಾಲಯದ ಬಾತ್ಮಿದಾರರು ತಿಳಿಸಿದ್ದಾರೆ.

ಈ ನಡುವೆ, ತಮಿಳುನಾಡಿನ ವಿವಿಧ ಕಡೆಗಳಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸುತ್ತಿರುವ ಆರೋಗ್ಯ ಕಾರ್ಯಪಡೆ, ಆಜ್ಞೆ ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಶ್ರಮಿಸುತ್ತಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+