ಪೀಣ್ಯಾ ಬಳಿ ಹಾರ್ಡ್ವೇರ್ ಪಾರ್ಕ್ ಸ್ಥಾಪಿಸಲು ಸರಕಾರದ ಚಿಂತನೆ
ಬೆಂಗಳೂರು : ಹಾರ್ಡ್ವೇರ್ ವಲಯಕ್ಕೆ ವಿದೇಶೀ ಬಂಡವಾಳವನ್ನು ಸೆಳೆಯಲು ಕರ್ನಾಟಕ ಸರಕಾರ ಶೀಘ್ರವೇ ಪೀಣ್ಯಾ ಬಳಿ ವಿಶೇಷ ಆರ್ಥಿಕ ವಲಯದಡಿ ಹಾರ್ಡ್ವೇರ್ ಟೆಕ್ನಾಲಜಿ ಪಾರ್ಕ್ ಸ್ಥಾಪಿಸುವ ಬಗ್ಗೆ ಚಿಂತಿಸುತ್ತಿದೆ. ಈ ವಿಷಯವನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾ ದೇಶವು ಹಾರ್ಡ್ವೇರ್ ಕ್ಷೇತ್ರದ ವಿಶ್ವ ಮಾರುಕಟ್ಟೆಯನ್ನು ಕೈವಶಪಡಿಸಿಕೊಳ್ಳಲಿದೆ ಎಂಬ ಭೀತಿಯೂ ರಾಜ್ಯ ಸರಕಾರದ ಈ ನಿರ್ಧಾರಕ್ಕೆ ಕಾರಣವಾಗಿದೆ. ಅತಿದೊಡ್ಡ ಹಾರ್ಡ್ವೇರ್ ವಲಯ ಹೊಂದಿರುವ ಚೀನಾ ಇಡೀ ವಿಶ್ವ ಮಾರುಕಟ್ಟೆಯಲ್ಲೇ ಸಾರ್ವಭೌಮ ಮೆರೆಯುವ ಸಾಧ್ಯತೆ ಇದ್ದು, ಅದಕ್ಕೆ ಪ್ರತಿಸ್ಪರ್ಧೆ ಒಡ್ಡಲು ಕರ್ನಾಟಕ ಮಾತ್ರ ಸಮರ್ಥವಾಗಿದೆ ಎಂಬುದು ಹಿರಿಯ ಅಧಿಕಾರಿಗಳ ಅಭಿಪ್ರಾಯ.
ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತವಾಗದಿದ್ದರೆ, ನಾವು ಅವಕಾಶ ವಂಚಿತರಾಗಬೇಕಾದೀತೆಂದು ರಾಜ್ಯ ಸರಕಾರ ಈ ನಿಟ್ಟಿನಲ್ಲಿ ತುರ್ತು ಚಿಂತನೆ ನಡೆಸಿದೆ. ಸರಕಾರ ತುರ್ತು ಕ್ರಮ ಕೈಗೊಳ್ಳದಿದ್ದರೆ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೇ ರಾಜ್ಯ ಸಾಧಿಸಿರುವ ಸಾಧನೆಗೂ ಪೆಟ್ಟು ಬೀಳುವ ಸಾಧ್ಯತೆಗಳಿವೆ.
ಈ ನಿಟ್ಟಿನಲ್ಲಿ ಈಗಾಗಲೇ ಇಲಾಖೆಯು ರಾಜ್ಯ ಸರಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದು, ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅನುಮತಿಗಾಗಿ ಕಾಯುತ್ತಿದೆ. ರಾಜ್ಯದ ಅನುಮತಿ ಸಿಕ್ಕ ಕೂಡಲೇ ಕೇಂದ್ರ ಸರಕಾರದ ಅನುಮತಿ ಪಡೆದು ವಿಶೇಷ ಆರ್ಥಿಕ ವಲಯ ಸ್ಥಾಪಿಸುವ ಉದ್ದೇಶ ಇಲಾಖೆಯದಾಗಿದೆ.
ಇದಕ್ಕಾಗಿ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ ಪೀಣ್ಯವನ್ನು ಗುರುತಿಸಿದೆ. ಈ ವಿಶೇಷ ಆರ್ಥಿಕ ವಲಯ ಕೇಂದ್ರ ಹಾಗೂ ರಾಜ್ಯ ಸರಕಾರದ ಹಿಡಿತದಲ್ಲಿರುತ್ತದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಸರಕಾರದ ಅನುಮತಿ ಸಿಕ್ಕರೆ, ಪೀಣ್ಯಾದಲ್ಲಿ ಹಾರ್ಡ್ವೇರ್ ಟೆಕ್ನಾಲಜಿ ಪಾರ್ಕ್ ತಲೆಎತ್ತುವ ಕಾಲ ದೂರವೇನಿಲ್ಲ.
(ಇನ್ಫೋ ವಾರ್ತೆ)
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications