ಸಾಫ್ಟ್ವೇರ್ ತಂತ್ರಜ್ಞರಿಗೆ ಮತ್ತೆ ಒಳ್ಳೆಕಾಲ ಬರತ್ತೆ : ಕೃಷ್ಣ ವಿಶ್ವಾಸ
ತುಮಕೂರು: ತಾಂತ್ರಿಕ ಕಾಲೇಜುಗಳನ್ನು ತೆರೆಯುವ ವಿಷಯದಲ್ಲಿ ರಾಜ್ಯ ಸರಕಾರ ಉದಾರ ನೀತಿ ಅನುಸರಿಸುತ್ತಿದೆ. ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ಯಾವುದೇ ಶಿಕ್ಷಣ ಸಂಸ್ಥೆ ತಾಂತ್ರಿಕ ಕಾಲೇಜು ತೆರೆಯಲು ಮುಂದೆ ಬಂದರೆ, ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದಾರೆ.
ಇಲ್ಲಿಗೆ ಸಮೀಪದ ಗುಬ್ಬಿಯಲ್ಲಿ ಚೆನ್ನ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸಿಐಟಿ ಕ್ಯಾಂಪಸ್ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ತಾಂತ್ರಿಕ ಕಾಲೇಜು ತೆರೆಯಲು ಬೇಡಿಕೆಯೇನೋ ಇದೆ. ಅವರು ಮೂಲಭೂತ ಸೌಕರ್ಯಗಳೊಂದಿಗೆ ಬಂದರೆ ಮಾತ್ರ ಅನುಮತಿ ನೀಡಲು ಸರಕಾರ ಸಿದ್ಧ ಎಂದರು.
ಬೇಡಿಕೆ ಬರತ್ತೆ : ರಾಜ್ಯದ ಎಲ್ಲ ಭಾಗದಲ್ಲಿಯೂ ಸುಸಜ್ಜಿತ ತಾಂತ್ರಿಕ ಕಾಲೇಜುಗಳಿರಬೇಕು ಎಂದು ರಾಜ್ಯ ಸರಕಾರ ಬಯಸುತ್ತದೆ. ಈ ನಿಟ್ಟಿನಲ್ಲಿ ಸರಕಾರದ ನೀತಿ ಅಛಲವಾಗಿದೆ ಎಂದರು. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆ ಹಾಗೂ ಅಮೆರಿಕ ಮೇಲೆ ನಡೆದ ವಿಧ್ವಂಸಕ ದಾಳಿಯ ಹಿನ್ನೆಲೆಯಲ್ಲಿ ಪ್ರಸ್ತುತ ಸಾಫ್ಟ್ವೇರ್ ಹಾಗೂ ಐ.ಟಿ. ತಂತ್ರಜ್ಞರಿಗೆ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ವರ್ಷಗಳಲ್ಲಿ ಅವರಿಗೆ ಮತ್ತೆ ಬೇಡಿಕೆ ಬಂದೇ ಬರುತ್ತದೆ ಎಂದು ಕೃಷ್ಣ ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಶಿವಕುಮಾರ ಸ್ವಾಮಿಜೀ, ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ವಿವೇಕಾನಂದಾಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ತಮ್ಮಡಿ ಹಳ್ಳಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬೆಟ್ಟದ ಹಳ್ಳಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಂಸತ್ ಸದಸ್ಯ ಜಿ.ಎಸ್. ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರುಗಳಾದ ಟಿ.ಬಿ. ಜಯಚಂದ್ರ, ಡಾ. ಜಿ. ಪರಮೇಶ್ವರ್, ಕಾಗೋಡು ತಿಮ್ಮಪ್ಪ, ರಾಣಿ ಸತೀಶ್ ಮೊದಲಾದವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಗುಬ್ಬಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications