ಹೊರ ರಾಜ್ಯದ ಹಾಲು- ಹಾಲಿನ ಉತ್ಪನ್ನಗಳ ಮೇಲೆ ಪ್ರವೇಶ ತೆರಿಗೆ
ಬೆಂಗಳೂರು : ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರವೇಶ ತೆರಿಗೆ ಹೇರಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯ ಪಶು ಸಂಗೋಪನೆ ಸಚಿವ ಎ. ಕೃಷ್ಣಪ್ಪ ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರ ಸರಕಾರಗಳು ಈಗಾಗಲೇ ಹೊರರಾಜ್ಯದ ಹಾಲಿನ ಮೇಲೆ ಪ್ರವೇಶ ತೆರಿಗೆ ಹೇರಿವೆ ಎಂದು ಹೇಳಿದ ಅವರು, ರಾಜ್ಯವು ಹೊರ ರಾಜ್ಯದ ಹಾಲಿನ ಮೇಲೆ ಎಷ್ಟು ಪ್ರವೇಶ ತೆರಿಗೆ ವಿಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಎಂದರು.
ಬೆಲ ಏರಿಕೆ ಇಲ್ಲ : ರಾಜ್ಯದಲ್ಲಿ ಹಾಲಿನ ಉತ್ಪಾದನೆ ಅಧಿಕವಾಗಿದ್ದು, 8 ರಾಜ್ಯಗಳಲ್ಲಿ ಹಾಲು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ರಾಜ್ಯದಲ್ಲಿ ಹಾಲಿನ ಬೆಲೆ ಏರಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಪತ್ರಕರ್ತರ ಪ್ರಶ್ನೆಯಾಂದಕ್ಕೆ ನೀಡಿದ ಉತ್ತರದಲ್ಲಿ ತಿಳಿಸಿದರು.
ಕಬ್ಬು ಸಾಗಣೆ ನಿಷೇಧ: ಈ ವರ್ಷ ರಾಜ್ಯದ ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕಬ್ಬಿನ ಉತ್ಪಾದನೆ ಪ್ರತಿಶತ 15ರಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ಗೋವಾಗಳಿಗೆ ಕಬ್ಬು ಸಾಗಣೆ ಮಾಡುವುದನ್ನು ನಿಷೇಧಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದೂ ಅವರು ಹೇಳಿದರು.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...