ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಾಜಿ ಕೇಂದ್ರ ಸಚಿವ ಎಂ.ವಿ.ಚಂದ್ರಶೇಖರ ಮೂರ್ತಿ ನಿಧನ
ಬೆಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವಿ.ಚಂದ್ರಶೇಖರ ಮೂರ್ತಿ ಮಂಗಳವಾರ ಬೆಳಗ್ಗೆ ನಗರದ ಮಲ್ಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು .
30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿದಿದ್ದ ಚಂದ್ರಶೇಖರ ಮೂರ್ತಿ, ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಸಂಪುಟದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕನಕಪುರ ಲೋಕಸಭಾ ಕ್ಷೇತ್ರವನ್ನು 4 ಬಾರಿ ಪ್ರತಿನಿಧಿಸಿದ್ದ ಅವರು, ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಶೇಖರ ಮೂರ್ತಿ ಅವರನ್ನು ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಮೃತರು ಅಗಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
Comments
Story first published: Wednesday, November 21, 2001, 5:30 [IST]