ಗಾಂಧಿ ರಸ್ತೆಯಲ್ಲಿ ಮರಕ್ಕೆ ಕೊಡಲಿ ; ದಿನಕರ್ ಕೋರ್ಟಿಗೆ
ಬೆಂಗಳೂರು: ಮಹಾತ್ಮಗಾಂಧಿ ರಸ್ತೆಯನ್ನು ಅಗಲಗೊಳಿಸುವ ಉದ್ದೇಶದಿಂದ, ರಸ್ತೆ ಪಕ್ಕದ ಮರಗಳನ್ನು ಕಡಿಯಲು ಆದೇಶ ಹೊರಡಿಸಿರುವ ನಗರ ಪೊಲೀಸ್ ಆಯುಕ್ತ ಎಚ್.ಟಿ.ಸಾಂಗ್ಲಿಯಾನ ಅವರ ಕ್ರಮವನ್ನು ಪ್ರಶ್ನಿಸಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ನಿವೃತ್ತಿಯ ನಂತರ ವಕೀಲಿ ವೃತ್ತಿಯನ್ನು ಅವಲಂಬಿಸಿರುವ ದಿನಕರ್, ಮರ ಕಡಿದು ಮಹಾತ್ಮ ಗಾಂಧಿ ರಸ್ತೆಯನ್ನು ಅಗಲಗೊಳಿಸುವ ಕ್ರಮವನ್ನು ಕೈ ಬಿಡುವಂತೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಮರಗಳನ್ನು ಕಡಿಯುವುದು 1976 ನೇ ಕರ್ನಾಟಕ ಮರ ಸಂರಕ್ಷಣಾ ಕಾಯಿದೆಯ ಸ್ಪಷ್ಟ ಉಲ್ಲಂಘನೆ ಎಂದೂ ದಿನಕರ್ ವಾದಿಸಿದ್ದಾರೆ.
ಪ್ರತಿ ತಿಂಗಳ ಮೊದಲ ಭಾನುವಾರ ಗಾಂಧಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ, ಮಕ್ಕಳಿಗೆ ಆಡವಾಡಲು ಅವಕಾಶ ಮಾಡಿಕೊಡುವ ಸಾಂಗ್ಲಿಯಾನ ಅವರ ಉದ್ದೇಶದ ಕ್ರಮಬದ್ಧತೆಯನ್ನೂ ಪ್ರಶ್ನಿಸಿರುವ ದಿನಕರ್, ಈ ರೀತಿಯ ಕ್ರಮ ಕೈಗೊಳ್ಳುವ ಅಧಿಕಾರ ಪೊಲೀಸ್ ಆಯುಕ್ತರಿಗೆ ಇಲ್ಲ ಎಂದು ತಿಳಿಸಿದ್ದಾರೆ. ದಿನಕರ್ ಅವರ ಅರ್ಜಿಯನ್ನು ಹೈಕೋರ್ಟ್ ಇನ್ನೂ ವಿಚಾರಣೆಗೆ ಅಂಗೀಕರಿಸಬೇಕಿದೆ.
(ಇನ್ಫೋ ವಾರ್ತೆ)
ಮುಖಪುಟ / ಸಾಂಗ್ಲಿಯಾನ ವಾಚ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications