ನಾಲ್ಕು ದಿನಗಳ ಮೈಸೂರುಐಟಿ.ಕಾಂ 2001
ಮೈಸೂರು : ಮಾಹಿತಿ ತಂತ್ರಜ್ಞಾನ ಕೇವಲ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಬಾರದು. ಅದು ಗ್ರಾಮಾಂತರ ಪ್ರದೇಶದಲ್ಲೂ ತನ್ನ ಛಾಪು ಮೂಡಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಗುರುವಾರ ಆರಂಭವಾದ ನಾಲ್ಕು ದಿನಗಳ ಮೈಸೂರುಐಟಿ.ಕಾಂ ಮೇಳದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಹಲವು ಕ್ರಮಗಳನ್ನು ಹಾಕಿಕೊಂಡಿದೆ. ಇದರ ಫಲವಾಗಿ ಬೆಂಗಳೂರಿನ ನಂತರ ಮೈಸೂರು ಮಾಹಿತಿ ತಂತ್ರಜ್ಞಾನ ನಗರಿಯಾಗಿ ಹೊರಹೊಮ್ಮಲಿದೆ ಎಂದರು.
ಮೈಸೂರು ನಗರದಲ್ಲಿ ಶಾಶ್ವತವಾದ ಮಾಹಿತಿ ತಂತ್ರಜ್ಞಾನದ ವಸ್ತು ಪ್ರದರ್ಶನ ಕೇಂದ್ರ ಮತ್ತು ಅತ್ಯಾಧುನಿಕ ಮಾಹಿತಿ ಕೇಂದ್ರ ಸ್ಥಾಪಿಸುವಂತೆ ಐ.ಟಿ. ಸಚಿವರಿಗೆ ಸಲಹೆ ನೀಡಿದ ವಿಶ್ವನಾಥ್, ಮಾಹಿತಿ ತಂತ್ರಜ್ಞಾನ ಕೇವಲ ನಗರ ಪ್ರದೇಶದ ಸ್ವತ್ತು ಎಂದು ಭಾವಿಸುವುದು ತಪ್ಪು ಎಂದರು.
ಗ್ರಾಮೀಣ ವಿದ್ಯಾರ್ಥಿಗಳೂ ಮಾಹಿತಿ ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಗ್ರಾಮಾಂತರ ಐ.ಟಿ. ಕ್ವಿಜ್ ಉತ್ತಮ ಕಾರ್ಯ ಮಾಡಿದೆ ಎಂದು ಪ್ರಶಂಸಿಸಿದರು. ಈ ಸಂಬಂಧ ರಾಜ್ಯ ಸರಕಾರ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂಬುದನ್ನು ಅವರು ಸೂಚ್ಯವಾಗಿ ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್, ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸಲು, ಎಸ್.ಎಂ. ಕೃಷ್ಣ ನೇತೃತ್ವದ ಸರಕಾರ ಹಗಲಿರುಳು ಶ್ರಮಿಸುತ್ತಿದೆ ಎಂದರು. ಬೆಂಗಳೂರಿನಿಂದ ಕಳೆದ ವರ್ಷ 7700 ಕೋಟಿ ರುಪಾಯಿ ಸಾಫ್ಟ್ವೇರ್ ರಫ್ತು ಮಾಡಲಾಗಿದೆ. ರಾಜ್ಯದಲ್ಲಿ ಸಾಫ್ಟ್ವೇರ್ ಕಂಪನಿಗಳಿಗೆ ವಿಫುಲ ಅವಕಾಶವಿದೆ. 165ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳು ಈ ಕ್ಷೇತ್ರವನ್ನು ಶ್ರೀಮಂತಗೊಳಿಸಿವೆ ಎಂದೂ ತಿಳಿಸಿದರು.
ಬಾಲಂಗೋಸಿ: ಅಂದಹಾಗೆ ಮೈಸೂರಿನಲ್ಲಿ ವೈಭವದ ಮೈಸೂರಿ ಐಟಿ.ಕಾಂ ನಡೆಯುತ್ತಿದೆ. ದೇಶ-ವಿದೇಶಗಳಿಂದ ಆಗಮಿಸಿರುವ ಕಂಪನಿಗಳು ಮಾಹಿತಿ ತಂತ್ರಜ್ಞಾನ ವಸ್ತು ಪ್ರದರ್ಶನವನ್ನೂ ಏರ್ಪಡಿಸಿವೆ. ಮೈಸೂರು ಐಟಿ.ಕಾಂ ಹಿರಿಮೆಯನ್ನು ಕಾರ್ಯದರ್ಶಿ ಹರ್ಷ ಹಾಗೂ ವೆಂಕಟೇಶ್ ಆನಂದದಿಂದ ವಿವರಿಸುತ್ತಿದ್ದಾರೆ.
ಆದರೆ, ನೀವು http://www.mysoreit.com/ ವೆಬ್ಸೈಟ್ಗೊಮ್ಮೆ ಭೇಟಿ ನೀಡಿದರೆ, ಮಹಾನ್ ತಂತ್ರಜ್ಞರ ಕಾರ್ಯವೈಖರಿ ಏನೆಂದು ತಿಳಿದೀತು.. ಈ ವೆಬ್ಸೈಟ್ ಅಪ್ಡೇಟ್ ಆಗಿ ತಿಂಗಳುಗಳೇ ಕಳೆದಿವೆ. ಈ ಅಂಶವನ್ನು ಕರ್ನಾಟಕ.ಕಾಂ ಬೆಳಕಿಗೆ ತಂದ ತರುವಾಯ ಏನಿರಬಹುದು ಎಂಬ ಕುತೂಹಲದಿಂದ ಲಾಗ್ ಮಾಡಲಾಯಿತು. ಕಾಣಿಸಿದ್ದು You are not authorized to view this page.
ಅರೆರೆರೆ ! ನಮ್ಮ ಸರ್ವರ್ನಲ್ಲೇ ಏನೋ ದೋಷ ಇರಬೇಕು ಎಂದಂದುಕೊಂಡು yahoo search ಗೆ ಭೇಟಿ ಕೊಟ್ಟರೆ ಇದು ಉತ್ತರ : MYSOREIT.COM COMING SOON !!! Close
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications