ವೀರಪ್ಪನ್ಗೆ ಸೆಲ್-ಕೆಸೆಟ್ ಪೂರೈಸುತ್ತಿದ್ದ ಶಿವಸುಬ್ರಮಣ್ಯಂ ಬಂಧನ
ರಾಮಾಪುರ : ವೀರಪ್ಪನ್ಗೆ ಇಲೆಕ್ಟ್ರಾನಿಕ್ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದ ನಕ್ಕೀರನ್ ಪತ್ರಿಕೆ ವರದಿಗಾರ ಶಿವಸುಬ್ರಮಣ್ಯಂನನ್ನು ಕರ್ನಾಟಕ ವಿಶೇಷ ಕಾರ್ಯಾಚರಣೆ ಪೊಲೀಸರು ಮಂಗಳವಾರ ರಾತ್ರಿ ಯಡಿಯಾರ ಹಳ್ಳದ ಬಳಿ ಮಾಲು ಸಮೇತ ಹಿಡಿದಿದ್ದಾರೆ.
ಕೆಸೆಟ್, ಬ್ಯಾಟರಿ, ಸೆಲ್ಗಳು, ಕೆಮೆರಾ ಮತ್ತಿತರ ವಸ್ತುಗಳನ್ನು ಶಿವಸುಬ್ರಮಣ್ಯಂನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಳ್ಳೆಗಾಲ ತಾಲ್ಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಈತ ಸಿಕ್ಕಿ ಬಿದ್ದಿದ್ದಾನೆ. ತಾವು ವಶಪಡಿಸಿಕೊಂಡಿರುವ ವಸ್ತುಗಳನ್ನು ವೀರಪ್ಪನ್ಗೆ ತಲುಪಿಸಲು ಒಯ್ಯುತ್ತಿದ್ದ ಎಂದು ಎಸ್ಟಿಎಫ್ ಪೊಲೀಸರು ತಿಳಿಸಿದ್ದಾರೆ.
ನರಹಂತಕ ವೀರಪ್ಪನ್ನನ್ನು ಮೊದಲ ಬಾರಿಗೆ ಸಂದರ್ಶನ ಮಾಡಿದ ಅಗ್ಗಳಿಕೆಗೆ ಪಾತ್ರವಾಗಿರುವ ಶಿವಸುಬ್ರಮಣ್ಯಂ, ನಕ್ಕೀರನ್ ಪತ್ರಿಕೆ ಸಂಪಾದಕ ಗೋಪಾಲ್ ಹಾಗೂ ವೀರಪ್ಪನ್ ನಡುವೆ ಸಂಪರ್ಕ ಕಲ್ಪಿಸಲೂ ಕಾರಣನಾಗಿದ್ದ. ನಕ್ಕೀರನ್ ಪತ್ರಿಕೆಗಾಗಿ ಪದೇಪದೇ ವೀರಪ್ಪನ್ ಸಂದರ್ಶನ ನಡೆಸಿರುವ ಈತ ಅಪಹರಣ ಪ್ರಕರಣಗಳಲ್ಲಿ ಸಂಧಾನಕಾರನಾಗಿಯೂ ಗೋಪಾಲ್ ಜೊತೆ ತೆರಳಿದ್ದಾರೆ.
ಕೊಯಮತ್ತೂರು ವರದಿ : ವೀರಪ್ಪನ್ ಸಹವರ್ತಿಗಳೆಂದು ಹೇಳಲಾದ ವೆಂಕಟ್ರಾಮನ್, ಸೆಲ್ವ ಮತ್ತು ಕುಪ್ಪುಸ್ವಾಮಿ ಎಂಬುವರನ್ನು ತಮಿಳುನಾಡು ಎಸ್ಟಿಎಫ್ ಪೊಲೀಸರು ಬಂಧಿಸಿದ್ದಾರೆ. ಆಹಾರ ಪದಾರ್ಥ ಕೊಳ್ಳಲು ಹೋಗುತ್ತಿದ್ದಾಗ ಇವರನ್ನು ಸಿರಿಮುಗಾೖ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ. ಬಂಧಿತರಿಂದ ಮೂರು ದೇಶೀ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications