ಕೊಡಲಿ ಆತಂಕದಿ ಚಿತ್ರದುರ್ಗದ 197 ಹುಣಸೆ,ಅಂಜೂರ,ಬೇವು
ಚಿತ್ರದುರ್ಗ: ಇಲ್ಲಿನ ಹೊಳಲ್ಕೆರೆಯ ಹಾದಿಪಕ್ಕದಲ್ಲಿನ ಸುಮಾರು 197 ಮರಗಳನ್ನು ರಾಷ್ಟ್ರೀಯ ಹೆದ್ದಾರಿ 13ರ ಅಗಲೀಕರಣ ಕಾರ್ಯಕ್ಕಾಗಿ ಕಡಿಯಲು ನಿರ್ಧರಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ವಿಭಾಗ ಈ ರಸ್ತೆ ಅಗಲೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಸುಮಾರು 422 ಕಿಮೀ ದೂರದವರೆಗಿನ ರಸ್ತೆಯನ್ನು ಅಗಲಗೊಳಿಸಲಾಗುವುದು. ಈ ಪ್ರದೇಶದಲ್ಲಿ 197 ಬೃಹತ್ ಗಾತ್ರದ ಮರಗಳು ಕಾಲುದಾರಿಗೆ ನೆರಳು ನೀಡುತ್ತಿವೆ. ಆದರೆ ಅರಣ್ಯ ಇಲಾಖೆಗೆ ರಾಷ್ಟ್ರೀಯ ಹೆದ್ದಾರಿ ವಿಭಾಗ ಬರೆದ ಪತ್ರದಲ್ಲಿ ಈ ಮರಗಳನ್ನು ಕಡಿಯಲು ಅನುಮತಿ ಕೇಳಲಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರೀಕ್ಷೆ ನಡೆಸಿದಾಗ ಈ ಪ್ರದೇಶದಲ್ಲಿ 167 ಹುಣಸೇ ಮರಗಳು, ಮತ್ತು ಹಿಪ್ಪೆ, ಬೇವು ಅಂಜೂರದ ಮರಗಳಿವೆ.
ಮರಗಳನ್ನು ಕತ್ತರಿಸದೇ ವಿಧಿಯಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗ ಹೇಳುತ್ತಿದ್ದರೆ, ಈ ಉತ್ತಮ ಜಾತಿಯ ಮರಗಳ ಟೊಂಗೆಗಳನ್ನು ಕತ್ತರಿಸುವುದರಿಂದ ಅಭಿವೃದ್ಧಿ ಕಾಮಗಾರಿಯನ್ನು ಮುಗಿಸಬಹುದು ಎಂದು ಅರಣ್ಯ ಇಲಾಖೆ ಹೇಳುತ್ತಿದೆ. ಅಲ್ಲದೆ ರಸ್ತೆಯ ಎರಡೂ ಬದಿಯ ಮರಗಳನ್ನು ಕಡಿಯುವ ಬದಲು ಒಂದೇ ಕಡೆಯ ಮರಗಳನ್ನು ಕತ್ತರಿಸುವ ಮೂಲಕವೂ ಕಾಮಗಾರಿ ಮುಂದುವರೆಸಬಹುದು.
ಆದರೆ ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ಈ ಸಲಹೆಗಳನ್ನೆಲ್ಲ ಕಿವಿಗೆ ಹಾಕಿಕೊಳ್ಳುವ ವ್ಯವಧಾನ ಇಲ್ಲ. ಮರಕಡಿಯುವ ಬಗ್ಗೆ ಅಕ್ಟೋಬರ್ 11ರೊಳಗೇ ಏನೇ ತಕರಾರು ಇದ್ದರೂ ಅರ್ಜಿ ಮುಖೇನ ಹೇಳುವಂತೆ ಸಾರ್ವಜನಿಕರಿಗೆ ಮತ್ತು ಪರಿಸರವಾದಿಗಳಿಗೆ ಸೂಚಿಸಲಾಗಿತ್ತು. ಈಗ ತಡವಾಗಿ ತಗಾದೆ ತೆಗೆಯುತ್ತಿರುವ ಅರಣ್ಯ ಇಲಾಖೆಯ ವಾದ ಸರಿಯಲ್ಲ ಎಂಬುದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ವಾದ.
ಜಿಲ್ಲೆಯಲ್ಲಿ ರಸ್ತೆ ಬದಿಯ ಮರಗಳು ಎರಡು ವರ್ಷಗಳಿಂದ ಸುಮಾರು 25 ಲಕ್ಷ ಆದಾಯ ತರುತ್ತಿವೆ. 80 ವರ್ಷಕ್ಕೂ ಹಿಂದಿನ ಹುಣಸೇ ಮರಗಳು ಇಲ್ಲಿವೆ. ಇವೆಲ್ಲವನ್ನೂ ಪರಿಗಣಿಸದೇ ರಾಷ್ಟ್ರೀಯ ಹೆದ್ದಾರಿ ವಿಭಾಗ ಮರ ಕಡಿಯುವುದಾದರೆ ಕಿಲೋಮೀಟರ್ಗೆ 54,200 ರೂಪಾಯಿಗಳನ್ನು ಅರಣ್ಯ ಇಲಾಖೆಗೆ ಅರಣ್ಯ ಅಭಿವೃದ್ಧಿಗಾಗಿ ನೀಡಬೇಕು. ಈ ಕಿರಿಕಿರಿಗಳನ್ನು ನಿವಾರಿಸಲು ಅರಣ್ಯ ವಿಭಾಗ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗಗಳು ಜಂಟಿಯಾಗಿ ವೀಕ್ಷಣೆ ನಡೆಸಲಿವೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications