ಜಾತಿಗೊಬ್ಬ ಜಗದ್ಗುರು ಇರುವ ಕುರಿತು ನಿಡುಮಾಮಿಡಿ ಕಿಡಿ
ಬೆಂಗಳೂರು : ಇತ್ತೀಚೆಗೆ ಜಗದ್ಗುರುಗಳ ಸಂಖ್ಯೆ ಹೆಚ್ಚುತ್ತಿದೆ. ಜಗದ್ಗುರು ಎಂದು ಹೇಳಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಜಾತಿಗೊಬ್ಬ ಜಗದ್ಗುರು ಇದ್ದಾರೆ,- ಈ ರೀತಿ ಜಗದ್ಗುರುಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದವರು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ.
ನಿಜವಾದ ಜಗದ್ಗುರುಗಳೆಂದರೆ ಮಹಾತ್ಮಗಾಂಧಿ, ವಿವೇಕಾನಂದ, ಅಂಬೇಡ್ಕರ್ ಅಂಥವರು ಮಾತ್ರ. ಜಾತಿಗೊಬ್ಬ ಜಗದ್ಗುರು ಇರಲೇಬಾರದು ಎಂದು ಸ್ವಾಮೀಜಿ ಹೇಳಿದರು. ಬೆಂಗಳೂರು ವಕೀಲರ ಸಂಘದ ಸಭಾಂಗಣದಲ್ಲಿ ಗುರುವಾರ, ಮತಾಂಧತೆ ಮತ್ತು ಮಾನವೀಯತೆ ಎನ್ನುವ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.
ಧರ್ಮಯುದ್ಧ ಅನೈತಿಕ, ಅಮಾನವೀಯ
ಧರ್ಮಯುದ್ಧ ಅನೈತಿಕ, ಅಮಾನವೀಯ ಎಂದು ಬಣ್ಣಿಸಿದ ಚನ್ನಮಲ್ಲ ಸ್ವಾಮೀಜಿ- ಮನುಷ್ಯರ ನಡುವೆ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಧರ್ಮವನ್ನು ಬೆಳೆಸಬೇಕು ಎಂದರು. ಒಂದು ಧರ್ಮಕ್ಕೆ ಪವಿತ್ರವಾದುದು ಇನ್ನೊಂದು ಧರ್ಮಕ್ಕೆ ಅಸಹನೀಯವಾಗುತ್ತದೆ. ಹಿಂದೂಗಳು ಪವಿತ್ರವೆಂದು ಪೂಜಿಸುವ ಹಸು, ಮುಸಲ್ಮಾನರಿಗೆ ರುಚಿಕರ ಭಕ್ಷ್ಯ. ಆದರೆ, ಪವಿತ್ರ ಅಪವಿತ್ರ ಇದೆಲ್ಲವನ್ನೂ ಮೀರಿ ಮಾನವೀಯ ಮೌಲ್ಯಗಳನ್ನು ಧರ್ಮ ಕಲಿಸಬೇಕು ಎಂದು ಸ್ವಾಮೀಜಿ ಹೇಳಿದರು.
ಬಾಬ್ರಿ ಮಸೀದಿ ನೆಲಸಮ ಮಾಡಿದ್ದು ದೌರ್ಜನ್ಯ. ಇದಕ್ಕೆ ವಿರುದ್ಧವಾಗಿ ಪಾಕಿಸ್ತಾನದಲ್ಲಿ ದೇವಸ್ಥಾನಗಳನ್ನು ಕೆಡವಿದ್ದೂ ದೌರ್ಜನ್ಯ. ಅಪಘನಿಸ್ತಾನದಲ್ಲಿ ಬುದ್ಧನ ವಿದಗ್ರಹ ನೆಲಸಮ ಮಾಡಿದ್ದೂ ದೌರ್ಜನ್ಯ. ಧರ್ಮ- ಧರ್ಮಗಳ ಸಂಘರ್ಷ ರಕ್ತಪಾತಕ್ಕೆ ಕಾರಣವಾಗುತ್ತದೆ. ಧರ್ಮ ಅಧರ್ಮದ ವಿರುದ್ಧ ಯುದ್ಧ ಸಾರಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications