ಕುಲದಲ್ಲಿ ಮೇಲಾವುದೋ ಹುಚ್ಚಪ್ಪ ಎಂದರು ದೇವೇಗೌಡರು!
ಬೆಂಗಳೂರು : ವಿಠಲೇನಹಳ್ಳಿ ಪಾದಯಾತ್ರೆ ಮೂಲಕ ಅಪಾರ ಪ್ರಚಾರ ಪಡೆದರೂ, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ದಾರುಣ ಸೋಲಿನಿಂದ ಕಂಗೆಟ್ಟು ಕಳೆದೊಂದು ವಾರದಿಂದ ಮಾಧ್ಯಮಗಳ ಕಣ್ಣಿನಿಂದ ದೂರವಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶುಕ್ರವಾರ ಮತ್ತೆ ಸುದ್ದಿಯಲ್ಲಿ ! ಅಪ್ರಧೀನ ಪ್ರಕಾಶನ ಮತ್ತು ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗೌಡರೇ ಕೇಂದ್ರಬಿಂದು!
ಡಾ। ನಲ್ಲೂರು ಪ್ರಸಾದ್ ಅವರ ಗಂಗಡಿಕಾರ ಒಕ್ಕಲಿಗರು ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ದೇವೇಗೌಡರು- ಪ್ರಬಲವಾಗುತ್ತಿರುವ ಜಾತೀಯತೆ ಬಗೆಗೆ ತಮ್ಮ ಆತಂಕ ವ್ಯಕ್ತಪಡಿಸಿದರು. ಜಾಗತಿಕ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಸೂಕ್ಷ್ಮವಾಗಿ ಪರೀಶೀಲಿಸಿದರೆ, ಜಾತಿ ವ್ಯವಸ್ಥೆಯಿಂದ ಇಡೀ ಮನುಕುಲ ಬಿಕ್ಕಟ್ಟಿಗೆ ಸಿಲುಕಿರುವುದು ಸ್ಪಷ್ಟವಾಗಿದೆ. ಸುವ್ಯವಸ್ಥಿತ ಸಮಾಜದ ಅವನತಿಗೆ ಜಾತಿ ಪದ್ಧತಿ ಕಾರಣವಾಗಲಿದೆ ಎಂದರು.
ಜನ ಸಾಮಾನ್ಯರ ಆಶೋತ್ತರಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅವರ ಸಮಸ್ಯೆಗಳನ್ನು ಪರಿಹರಿಸಲೋಸುಗುವೆ ತಾವು ಸಣ್ಣ ಪುಟ್ಟ ವಿಷಯಗಳ ಬಗೆಗೂ ಗಮನ ಹರಿಸುತ್ತಿರುವುದಾಗಿ ಹೇಳಿದ ದೇವೇಗೌಡ, ಜನತೆಯ ಸಮಸ್ಯೆಗಳಿಗೆ ಬೆನ್ನು ಹಾಕಿರುವ ಕೇಂದ್ರ ಸರ್ಕಾರದ ನಕಾರಾತ್ಮಕ ನಿಲುವನ್ನು ಟೀಕಿಸಿದರು.
ಗಂಗಡಿಕಾರ ಒಕ್ಕಲಿಗರು ಕೃತಿಯ ಲೇಖಕ ನಲ್ಲೂರು ಪ್ರಸಾದ್ ಅವರನ್ನು ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು. ಡ। ಹಂ.ಪ.ನಾಗರಾಜಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಾರ್ಯದರ್ಶಿ ಪುಂಡಲೀಕ ಹಾಲಂಬಿ, ಜಾನಪದ ವಿದ್ವಾಂಸ ಚಕ್ಕರೆ ಶಿವಶಂಕರ್, ಶಾಸಕ ಚೆಲುವರಾಯ ಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications