ಆಂಥ್ರಾಕ್ಸ್ನಿಂದ 3 ವರ್ಷದಲ್ಲಿ ಸತ್ತ ದನಕರುಗಳ ಸಂಖ್ಯೆ 479
ನವದೆಹಲಿ: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಆಂಥ್ರಾಕ್ಸ್ ರೋಗದಿಂದ ದೇಶದಲ್ಲಿ ಬಲಿಯಾದ ಜಾನುವಾರುಗಳ ಸಂಖ್ಯೆ ಎಷ್ಟು ಗೊತ್ತೆ? 479 ಎನ್ನುತ್ತವೆ ವರದಿಗಳು. ಈ ವಿಷಯವನ್ನು ಕೇಂದ್ರ ಕೃಷಿ ಸಚಿವ ಹುಕುಂದೇವ್ ನಾರಾಯಣ್ ಯಾದವ್ ಲೋಕಸಭೆಗೆ ತಿಳಿಸಿದ್ದಾರೆ.
ಇಂದು ದೇಶವನ್ನೇ ಆತಂಕಕ್ಕೆ ಈಡು ಮಾಡಿರುವ ಆಂಥ್ರಾಕ್ಸ್ ವಿಷಯ ಚರ್ಚೆಗೆ ಬಂದಾಗ, ಲಿಖಿತ ಉತ್ತರ ನೀಡಿದ ಸಚಿವರು, ಮೂರು ವರ್ಷಗಳ ಅವಧಿಯಲ್ಲಿ ಆಂಥ್ರಾಕ್ಸ್ ಸೋಂಕಿಗೆ ಬಲಿಯಾದ ದನಕರುಗಳ ವಿವರ ನೀಡಿದರು. ಮಾರಕವಾದ ಈ ರೋಗವನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದ್ದಾರೆ.
ರೋಗ ನಿಯಂತ್ರಿಸಲು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವಂತೆ ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ ಎಂದೂ ಯಾದವ್ ತಿಳಿದ್ದಾರೆ.
ಕರ್ನಾಟಕದಲ್ಲಿ 1983ರಿಂದಲೂ ಆಂಥ್ರಾಕ್ಸ್ಗೆ ಹಲವು ಜಾನುವಾರುಗಳು ಸಾವನ್ನಪ್ಪಿವೆ. ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದರು. ಇಲ್ಲಿ 20 ಕುರಿ, ಒಂದು ಎತ್ತು ಮತ್ತು ಎರಡು ಹಸುಗಳೂ ಸಾವನ್ನಪ್ಪಿದ್ದವು ಎಂಬುದನ್ನು ಸ್ಮರಿಸಬಹುದಾಗಿದೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications