ಯಾವುದೇ ಕ್ಷಣದಲ್ಲಿ ನಕ್ಕೀರನ್ ಗೋಪಾಲ್ ಬಂಧನ ಸಾಧ್ಯತೆ
* ನಾಗೇಂದ್ರ ಪ್ರಸಾದ್, ನಂಜನಗೂಡು
ಮೈಸೂರು : ಕನ್ನಡದ ವರನಟ ಡಾ. ರಾಜ್ಕುಮಾರ್ ಅಪಹರಣದ ಸಂಚು ರೂಪಿಸಿದ್ದರೆನ್ನಲಾದ ನಕ್ಕೀರನ್ ಪತ್ರಿಕೆಯ ಸಂಪಾದಕ ಆರ್.ಆರ್. ಗೋಪಾಲ್ ಅವರನ್ನು ಬಂಧಿಸಲು ಎಸ್.ಟಿ.ಎಫ್. ಪೊಲೀಸರು ಸಜ್ಜಾಗಿದ್ದಾರೆ. ಯಾವುದೇ ಕ್ಷಣದಲ್ಲಿ ಗೋಪಾಲ್ ಬಂಧನ ಆಗಬಹುದು ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತೆ ಕಾಯ್ದೆಯಡಿ ಗೋಪಾಲ್ರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹೊತ್ತು ಕೊಳ್ಳೆಗಾಲ ಪೊಲೀಸರ ವಶದಲ್ಲಿರುವ ಟಿಎನ್ಎಲ್ಎ ಉಗ್ರರು ನೀಡಿರುವ ಹೇಳಿಕೆಯ ಆಧಾರದ ಮೇಲೆ ಗೋಪಾಲ್ರನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರು ಚಿಂತಿಸುತ್ತಿದ್ದಾರೆ.
ಈ ಮಧ್ಯೆ ರಾಜ್ ಅಪಹರಣ ಕಾಲದಲ್ಲಿ ಕಾಡಿನಿಂದ ನಾಡಿಗೆ ಓಡಿಬಂದ ನಾಗಪ್ಪ ಮಾರಡಗಿ ಸಹ ರಾಜ್ ಅಪಹರಣದಲ್ಲಿ ಗೋಪಾಲ್ ಕೈವಾಡವಿದೆ ಎಂಬುದನ್ನು ಬೆಂಗಳೂರಿನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾರಿಸಾರಿ ಹೇಳಿದ್ದಾರೆ.
ಪ್ರಚೋದನಾತ್ಮಕ ಯೋಜನೆ ತಯಾರಿಸಿದ, ಅಪಹರಣ ತಂತ್ರ ರೂಪಿಸಿದ ಆರೋಪದ ಮೇಲೆ ಗೋಪಾಲ್ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವ ಬಗ್ಗೆ ಎಸ್.ಟಿ.ಎಫ್. ಗಂಭೀರವಾಗಿ ಚಿಂತಿಸುತ್ತಿದೆ. ಕಾಡಿನಲ್ಲಿ ಗೋಪಾಲ್ ತಮ್ಮ ಮೇಲೆ ಹಲ್ಲೆ ನಡೆಸಿದರು, ಕೊಲ್ಲಲು ಪ್ರಯತ್ನಿಸಿದರು ಎಂದು ಹೇಳಿರುವ ನಾಗಪ್ಪ ಮಾರಡಗಿ, ದೂರು ದಾಖಲಿಸಿದರೆ, ನಕ್ಕೀರನ್ ಗೋಪಾಲ್ ಬಂಧನ ಸುಲಭವಾಗುತ್ತದೆ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು.
ಒಂದೊಮ್ಮೆ ಮಾರಡಗಿ ದೂರು ನೀಡದಿದ್ದರೂ, ಉಗ್ರರು ನೀಡಿರುವ ಹೇಳಿಕೆ ಆಧರಿಸಿಯೇ ಗೋಪಾಲ್ರನ್ನು ಬಂಧಿಸಲು ಅವಕಾಶವಿದೆ ಎಂದೂ ಅವರು ಹೇಳಿದ್ದಾರೆ.
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications