ಗೋಪಾಲ್ ಬಂಧನಕ್ಕೆ ಯತ್ನಿಸದಂತೆ ಚೆನ್ನೈ ಪತ್ರಕರ್ತರ ಎಚ್ಚರಿಕೆ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ಗೆ ನೆರವಾಗುತ್ತಿದ್ದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಬಂಧಿಸಿರುವ ನಕ್ಕೀರನ್ ವರದಿಗಾರ ಶಿವಸುಬ್ರಹ್ಮಣ್ಯನ್ ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪತ್ರಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಒಂದು ಗಂಟೆಕಾಲ ಪ್ರದರ್ಶನ ನಡೆಸಿದರು.
ಚೆನ್ನೈನ ನಾಲ್ಕು ಮೀಡಿಯಾ ಸಂಘಟನೆಗಳ ಪತ್ರಕರ್ತರು ಬೆಂಗಳೂರಿನ ಸರಕಾರಿ ಅತಿಥಿಗೃಹದ ಎದುರು ಪ್ರತಿಭಟನೆ ನಡೆಸಿ, ನಕ್ಕೀರನ್ ವರದಿಗಾರ ಶಿವಸುಬ್ರಹ್ಮಣ್ಯನ್ನನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಮದ್ರಾಸ್ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಚೆನ್ನೈ ಪ್ರೆಸ್ ಕ್ಲಬ್, ಜರ್ನಲಿಸ್ಟ್ಸ್ ಆ್ಯಕ್ಷನ್ ಗ್ರೂಪ್ ಮತ್ತು ಮದ್ರಾಸ್ ರಿಪೋರ್ಟರ್ಸ್ ಗಿಲ್ಡ್ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಈ ಪತ್ರಕರ್ತರು ಶಿವಸುಬ್ರಹ್ಮಣ್ಯನ್ನನ್ನು ಬಂಧಿಸಿರುವ ಕರ್ನಾಟಕ ಪೊಲೀಸರ ಕ್ರಮವನ್ನು ಖಂಡಿಸಿದರು. ಶಿವಸುಬ್ರಹ್ಮಣ್ಯನ್ ಅವರನ್ನು ಕರ್ನಾಟಕ ಕಾಡಿನಲ್ಲಿ ಬಂಧಿಸಲಾಗಿದೆ ಎಂಬುದು ಸುಳ್ಳು. ವಾಸ್ತವವಾಗಿ ಅವರನ್ನು ಸೇಲಂ ಜಿಲ್ಲೆಯ ಅವರ ಮನೆ ಬಳಿಯಿಂದ ಅಪಹರಿಸಿ ತರಲಾಗಿದೆ ಎಂದೂ ಆರೋಪಿಸಿದರು.
ಕರ್ನಾಟಕ ಪೊಲೀಸರ ವರ್ತನೆ ಕಾನೂನು ಬಾಹಿರವಾಗಿದ್ದು, ಸರ್ವೋನ್ನತ ನ್ಯಾಯಾಲಯದ ನೀತಿಸಂಹಿತೆಗೆ ವಿರುದ್ಧವಾಗಿದೆ ಎಂದು ತಮಿಳುನಾಡಿನ ಪತ್ರಕರ್ತರು ಆಪಾದಿಸಿದರು. ನಕ್ಕೀರನ್ ಪತ್ರಿಕೆಯ ಸಂಪಾದಕ ಆರ್.ಆರ್. ಗೋಪಾಲ್ರನ್ನು ಬಂಧಿಸಿದರೆ, ಪರಿಣಾಮ ನೆಟ್ಟಗಾಗದು ಎಂದೂ ಅವರು ಎಚ್ಚರಿಕೆ ನೀಡಿದರು.
ಗೋಪಾಲ್ರನ್ನು ಬಂಧಿಸಲು ಯತ್ನಿಸಿದರೆ, ತಮಿಳುನಾಡು ಹಾಗೂ ಪಾಂಡಿಚೇರಿಯ ಎಲ್ಲ ಮಾಧ್ಯಮ ಪ್ರತಿನಿಧಿಗಳ ತೀವ್ರ ಪ್ರತಿರೋಧ ಎದುರಿಸಬೇಕಾದೀತು ಎಂದು ಪ್ರತಿಭಟನೆಕಾರರು ಹೇಳಿದರು. ಶಿವಸುಬ್ರಹ್ಮಣ್ಯನ್ ಬಿಡುಗಡೆ ಆಗದಿದ್ದರೆ, ಡಿಸೆಂಬರ್ 3ರಂದು ಚೆನ್ನೈನಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನಿಗಮದ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿಯೂ ಅವರು ತಿಳಿಸಿದರು.
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications