ಕೊಡಗು: ಸರ್ವಶಿಕ್ಷಣ ಅಭಿಯಾನ ಅನುಷ್ಠಾನಕ್ಕೆ 45 ಕೋಟಿ ನೆರವು
ಮಡಿಕೇರಿ: ಜಿಲ್ಲೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಸರ್ವ ಶಿಕ್ಷಣ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯಸರಕಾರಗಳು ಒಟ್ಟು 45 ಕೋಟಿ ರೂಪಾಯಿಗಳ ನೆರವು ನೀಡಲಿವೆ.
ಕೊಡಗು ಜಿಲ್ಲಾ ಪಂಚಾಯತ್ನ ಸಿಇಒ, ಎಂ.ಕೆ. ಬಲದೇವ ಕೃಷ್ಣ ಈ ವಿಷಯವನ್ನು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ವ ಶಿಕ್ಷಣ ಅಭಿಯಾನವನ್ನು ಜಾರಿಗೊಳಿಸಲು ಕೇಂದ್ರಸರಕಾರವು ಜಿಲ್ಲೆಗೆ ಶೇ 75ರಷ್ಟು ಹಣ ಒದಗಿಸಲಿದೆ ಉಳಿದ ಹಣ ರಾಜ್ಯ ಸರಕಾರದಿಂದ ಮಂಜೂರಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಯೋಜನೆ ಆರಂಭವಾಗಲಿದೆ.
ಎಲ್ಲ ಮಕ್ಕಳಿಗೂಶಿಕ್ಷಣ ನೀಡುವ ಉದ್ದೇಶದಿಂದ, ಚಿಣ್ಣರ ಅಂಗಳ ಕಾರ್ಯಕ್ರಮದಡಿ, ಅರ್ಧದಲ್ಲಿಯೇ ಶಾಲೆ ಬಿಟ್ಟು ಹೋಗಿದ್ದ ಜಿಲ್ಲೆಯ ಸುಮಾರು 7 ಸಾವಿರ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದೆ. ರಾಜ್ಯದೆಲ್ಲೆಡೆ ಅರ್ಧದಲ್ಲಿಯೇ ಶಾಲೆಬಿಟ್ಟು ಶಿಕ್ಷಣ ವಂಚಿತರಾದ ಮಕ್ಕಳ ಮರು ಸೇರ್ಪಡೆಗೆ ಸರಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೊಡಗಿನಲ್ಲಿಯೂ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಬಲದೇವ ಕೃಷ್ಣ ಹೇಳಿದರು.
ಇತ್ತೀಚೆಗೆ ಜಿಲ್ಲೆಯ ಶಾಲೆಯಾಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಲು ವಿರೋಧಿಸಿದ ಪ್ರಕರಣವನ್ನು ಉಲ್ಲೇಖಿಸಿದ ಬಲದೇವ ಅವರು, ಮಕ್ಕಳಲ್ಲಿ ರಾಷ್ಟ್ರೀಯ ಏಕತೆಯ ಅರಿವನ್ನು ಮೂಡಿಸಲು ಹೆತ್ತವರೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications