ಎಂ.ಜಿ. ರಸ್ತೆಗೆ ಆಟದ ಮೈದಾನ ಆಗುವ ಯೋಗವೇ ಇಲ್ಲ
ಬೆಂಗಳೂರು : ಬೆಂಗಳೂರಿನ ಮಹಾತ್ಮಾ ಗಾಂಧೀ ರಸ್ತೆಯಲ್ಲಿ ನಿರ್ಭೀತಿಯಿಂದ ಆಟವಾಡುವ ಮಕ್ಕಳ ಕನಸು ನುಚ್ಚು ನೂರಾಗಿದೆ. ಕಳೆದ 15ದಿನಗಳಿಂದ ಡಿ.2ರ ಭಾನುವಾರ ಯಾವಾಗ ಬರುತ್ತದೋ, ನಾವು ಎಷ್ಟೊತ್ತಿಗೆ ಎಂ.ಜಿ. ರಸ್ತೆಯಲ್ಲಿ ಕ್ರಿಕೆಟ್ ಆಡುತ್ತೇವೋ ಎಂದು ಕಾದಿದ್ದ ಪುಟಾಣಿಗಳಿಗೆ ಭ್ರಮನಿರಸನವಾಗಿದೆ.
ಪ್ರತಿ ತಿಂಗಳ ಮೊದಲ ಭಾನುವಾರ ಮಕ್ಕಳಿಗೆ ಆಟವಾಡಲು ಎಂ.ಜಿ. ರಸ್ತೆಯನ್ನು ಮುಕ್ತಗೊಳಿಸುವ ಮತ್ತು ರಸ್ತೆ ಸಂಚಾರ ನಿಯಮಗಳ ಬಗ್ಗೆ ತಿಳಿಸಿ ಹೇಳಲು ಕಮಿಷನರ್ ಎಚ್.ಟಿ. ಸಾಂಗ್ಲಿಯಾನಾ ಅವರು ಹಮ್ಮಿಕೊಂಡಿದ್ದ ಯೋಜನೆ ರದ್ದಾಗಿದೆ.
ಮಹಾತ್ಮಾ ಗಾಂಧೀ ರಸ್ತೆ ಬದಲಿಗೆ ಸನಿಹದಲ್ಲೇ ಇರುವ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆ ಕಾರ್ಯಕ್ರಮ ನಡೆಸಲು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಜೊತೆ ಸಾಂಗ್ಲಿಯಾನಾ ಮಾತುಕತೆ ನಡೆಸಿದ್ದಾರೆ. ಈ ವಿಷಯವನ್ನು ಖುದ್ದು ಸಾಂಗ್ಲಿಯಾನಾ ಅವರೇ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
ನೃಪತುಂಗ ರಸ್ತೆ : ಡಿ.1ರ ಶನಿವಾರದಿಂದ ನೃಪತುಂಗ ರಸ್ತೆಯನ್ನು ಮತ್ತೆ ದ್ವಿಮುಖ ಸಂಚಾರಕ್ಕೆ ಮುಕ್ತಗೊಳಿಸುವ ನಿರ್ಧಾರವನ್ನೂ ಅನಿರ್ದಿಷ್ಟಕಾಲ ಮುಂದೂಡಲಾಗಿದೆ. ಬೆಂಗಳೂರಿನ ನ್ಯಾಯಾಲಯದಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾಂಗ್ಲಿಯಾನ ತಿಳಿಸಿದ್ದಾರೆ.
ಸಾರ್ವಜನಿಕ ಅರ್ಜಿ ಇತ್ಯರ್ಥವಾಗುವ ಮೊದಲು ಪ್ರಾಯೋಗಿಕವಾಗಿ ಒಂದು ವಾರಕಾಲ ದ್ವಿಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸುವುದು ಸೂಕ್ತವಲ್ಲ ಎಂದ ಅವರು, ಏಕಮುಖ ಸಂಚಾರ ವ್ಯವಸ್ಥೆ ವಿರುದ್ಧ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳ ಪೈಕಿ ಒಂದು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ ಎಂದೂ ಅವರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications