ಮೈಸೂರಿನಲ್ಲಿ ಸಂಭ್ರಮದ ಕೊಡಗು ಜಿಲ್ಲಾ ಸಾಂಸ್ಕೃತಿಕ ಉತ್ಸವ
ಬೆಂಗಳೂರು : ಸಂಸ್ಕೃತಿಗೆ ಕರ್ನಾಟ, ಕೊಡವ, ತುಳು ಎಂಬ ಬೇರೆ ಬೇರೆ ಅರ್ಥಗಳೇನಿಲ್ಲ ಎಲ್ಲವೂ ಭಾರತೀಯ ಸಂಸ್ಕೃತಿಯನ್ನು ತಮ್ಮದೇ ಅದ ರೀತಿಯಲ್ಲಿ ಬಿಂಬಿಸುತ್ತವೆ ಅಷ್ಟೇ ಎಂದು ರಾಜ್ಯದ ಅಬಕಾರಿ ಸಚಿವ ಎಂ.ಎಂ. ನಾಣಯ್ಯ ಹೇಳಿದರು.
ಭಾನುವಾರ ರಾತ್ರಿ ಮೈಸೂರು ದಸರಾ ವಸ್ತು ಪ್ರದರ್ಶನ ಬಯಲು ರಂಗಮಂದಿರದಲ್ಲಿ ಕೊಡಗು ಜಿಲ್ಲಾ ಪಂಚಾಯ್ತಿ ಏರ್ಪಡಿಸಿದ್ದ, ಕೊಡಗು ಜಿಲ್ಲಾ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಕೊಡವ ಸಂಸ್ಕೃತಿಗೆ ವಿಶಿಷ್ಟ ಗೌರವವಿದೆ ಎಂದರು.
ಈ ಸಾಂಸ್ಕೃತಿಕ ಉತ್ಸವದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಮಾತನಾಡಿ, ಕೊಡಗು ಕನ್ನಡ ನಾಡಿನ ಕಾಶ್ಮೀರವಿದ್ದಂತೆ ಎಂದು ಬಣ್ಣಿಸಿದರು. ಇಲ್ಲಿನ ಜನ ತಮ್ಮ ಶೌರ್ಯ ಪರಾಕ್ರಮಗಳಿಂದ ರಾಷ್ಟ್ರಮಟ್ಟದಲ್ಲಿ ವಿಶಿಷ್ಟ ಸ್ಥಾನ ಸಂಪಾದಿಸಿದ್ದಾರೆ ಎಂದರು.
ವೈಭವದ ಈ ಸಮಾರಂಭದಲ್ಲಿ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ. ಅಪ್ಪಣ್ಣ, ವಸ್ತು ಪ್ರದರ್ಶನ ಪ್ರಾಧಿಕಾರದ ವಿಶೇಷಾಧಿಕಾರಿ ಮ.ಗು. ಸದಾನಂದಯ್ಯ, ಕೊಡಗು ಜಿಲ್ಲಾ ಪರಿಷತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಕೆ. ಬಲದೇವ ಕೃಷ್ಣ ಮೊದಲಾದವರು ಭಾಗವಹಿಸಿದ್ದರು. ಕೊಡಗಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಕಲಾ ಪ್ರಕಾರಗಳ ಪ್ರದರ್ಶನವೂ ಈ ಸಂದರ್ಭದಲ್ಲಿ ನಡೆಯಿತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications