ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರಿನಲ್ಲಿ ಶನಿವಾರದಿಂದ ಕರಕುಶಲ ಸಪ್ತಾಹ

By Staff
|
Google Oneindia Kannada News

ಮಂಗಳೂರು : ಮಂಗಳೂರಿನಲ್ಲಿ ಶನಿವಾರದಿಂದ 8 ದಿನಗಳ ಅಖಿಲ ಭಾರತ ಕರಕುಶಲ ಸಪ್ತಾಹ ನಡೆಯಲಿದೆ. ಕೇಂದ್ರ ಸರಕಾರದ ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಹಾಗೂ ಜವಳಿ ಸಚಿವಾಲಯವು ಈ ಸಪ್ತಾಹವನ್ನು ಆಯೋಜಿಸಿವೆ.

ಈ ಸಪ್ತಾಹದ ಅಂಗವಾಗಿ ಇಲಾಖೆಯು ಡಿ.14ರಂದು ರಾಜ್ಯಮಟ್ಟದ ಮಾರುಕಟ್ಟೆ ಕಾರ್ಯಾಗಾರವನ್ನು ಏರ್ಪಡಿಸಿದೆ. ಈ ವಿಷಯವನ್ನು ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಮತ್ತು ಜವಳಿ ಸಚಿವಾಲಯದ ಕರಕುಶಲ ವಸ್ತುಗಳ ಮಾರಾಟ ಮತ್ತು ಸೇವೆಯ ವಿಸ್ತರಣಾ ಕೇಂದ್ರದ ನಿರ್ದೇಶಕ ಆರ್‌. ಚಂದ್ರನ್‌ ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ತಿಳಿಸಿದರು.

ಸ್ಥಳೀಯ ಮಟ್ಟದಲ್ಲಿ ನಡೆಯಲಿರುವ ಈ ಮಾರುಕಟ್ಟೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ 50ಕ್ಕೂ ಹೆಚ್ಚು ಕುಶಲಕರ್ಮಿಗಳು ಮತ್ತು ವಿವಿಧ ಕ್ಷೇತ್ರಗಳ ತಜ್ಞರು ಹಾಗೂ ಸರಕಾರೇತರ ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ. ಇವರ ನಡುವೆ ಮಾರುಕಟ್ಟೆ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ ಎಂದು ಅವರು ಹೇಳಿದರು.

(ಪಿ.ಟಿ.ಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X