ಆಹಾರ ಸಂಸ್ಕರಣೆಯಲ್ಲಿ 10 ಸಾವಿರ ಕೋಟಿ ರು. ಬಂಡವಾಳ ಹೂಡಿಕೆ
ಬೆಂಗಳೂರು : ಆಹಾರ ಸಂಸ್ಕರಣೆ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಮುಂದಿನ 5 ವರ್ಷಗಳ ಅವಧಿಯಲ್ಲಿ 10 ಸಾವಿರ ಕೋಟಿ ರುಪಾಯಿ ಬಂಡವಾಳ ಹೂಡುವುದಾಗಿ ಕರ್ನಾಟಕ ಸರ್ಕಾರ ಪ್ರಕಟಿಸಿದೆ.
ಬುಧವಾರ ಮುಕ್ತಾಯವಾದ 5 ದಿನಗಳ ಅವಧಿಯ ಬೆಂಗಳೂರು ಕೃಷಿ ಆಹಾರ ಮೇಳ ಘೋಷಣೆ ಪತ್ರವನ್ನು ಗುರುವಾರ ಬಿಡುಗಡೆ ಮಾಡಿ, ಕೃಷಿ ಸಚಿವ ಟಿ.ಬಿ.ಜಯಚಂದ್ರ ಈ ವಿಷಯ ತಿಳಿಸಿದರು. ಅವರ ಜೊತೆಯಲ್ಲಿ ತೋಟಗಾರಿಕೆ ಸಚಿವ ಕಾಗೋಡು ತಿಮ್ಮಪ್ಪ ಕೂಡ ಇದ್ದರು. ಕೃಷಿ ಕ್ಷೇತ್ರದ ಪ್ರಗತಿಯ ಪ್ರಮಾಣ ಈಗ ಶೇ.2ರಷ್ಟಿದೆ. ಅದನ್ನು ಪ್ರತಿಶತ 10ರಷ್ಟಕ್ಕೆ ಹೆಚ್ಚಿಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಬಂಡವಾಳ ಹೂಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಸಚಿವರು ಹೇಳಿದರು.
ಕರ್ನಾಟಕದ ಮಾದರಿಯ ಗುತ್ತಿಗೆ ಆಧಾರಿತ ತೋಟಗಾರಿಕೆ ವ್ಯವಸ್ಥೆಯನ್ನು ದೇಶದ ಬೇರೆ ರಾಜ್ಯಗಳಲ್ಲೂ ಯಶಸ್ವಿಯಾಗಿ ಜಾರಿಗೆ ತರಬೇಕು. ಅರಣ್ಯ ಉತ್ಪನ್ನಗಳನ್ನು ತೋಟಗಾರಿಕೆ ಉತ್ಪನ್ನಗಳೊಂದಿಗೆ ಗುರ್ತಿಸುವುದು ಸರಿಯಲ್ಲ. ಜೊತೆಗೆ ಅರಣ್ಯ ಇಲಾಖೆ ನಿಯಂತ್ರಣದಲ್ಲಿರುವ 9500 ಮಾದರಿಯ ಆಯುರ್ವೇದ ಔಷಧ ಸಸ್ಯಗಳನ್ನು ಬೆಳೆಸಲು ಮುಕ್ತ ಅವಕಾಶ ನೀಡಬೇಕು ಎಂಬುದು ನಮ್ಮ ಶಿಫಾರಸು ಎಂದು ಸಚಿವ ಜಯಚಂದ್ರ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications