ಡಾ.ಡಿ.ಎಂ.ನಂಜುಂಡಪ್ಪ ಕಂಡಂತೆ ಉತ್ತರ ಕರ್ನಾಟಕದ ಕಣ್ಣಿಗೆ ಸುಣ್ಣ
ಬೆಂಗಳೂರು : ಹೆಸರಾಂತ ಅರ್ಥತಜ್ಞ ಡಾ। ಡಿ.ಎಂ. ನಂಜುಂಡಪ್ಪ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆಯ ಉನ್ನತಾಧಿಕಾರ ಸಭೆಯ ಮಧ್ಯಂತರದ ವರದಿಯ ಕೆಲವು ಅಂಶಗಳನ್ನು ಗಮನಿಸಿ :
ರಾಜ್ಯದಲ್ಲಿನ ತಾಲ್ಲೂಕುಗಳ ಸಂಖ್ಯೆ : 175
ಹಿಂದುಳಿದ ತಾಲ್ಲೂಕುಗಳ ಸಂಖ್ಯೆ : 95
ಉತ್ತರ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳ ಸಂಖ್ಯೆ : 45.
ವಿಧಾನಸೌಧದಲ್ಲಿ ಗುರುವಾರ ನಡೆದ ಪ್ರಾದೇಶಿಕ ಅಸಮತೋಲನ ನಿವಾರಣೆಯ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಗಮನಕ್ಕೆ ತರಲಾಯಿತು. ಮಾರ್ಚ್ ತಿಂಗಳ ಒಳಗಾಗಿ ಸಮಿತಿ ತನ್ನ ಅಂತಿಮ ವರದಿಯನ್ನು ನೀಡಲಿದೆ ಎಂದು ಸಭೆಯ ನಂತರ ಡಿ.ಎಂ.ನಂಜುಂಡಪ್ಪನವರು ಸುದ್ದಿಗಾರರಿಗೆ ತಿಳಿಸಿದರು.
ಸಮಿತಿಯ ಅಂತಿಮ ವರದಿ ಸಿದ್ಧವಾದ ನಂತರ ಮತ್ತೊಮ್ಮೆ ಸಭೆ ಕರೆಯಲು ಮುಖ್ಯಮಂತ್ರಿ ಬಯಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬೃಹತ್ ಉದ್ದಿಮೆಗಳನ್ನು ಸ್ಥಾಪಿಸಲು ಹಾಗೂ ಈ ಉದ್ದಿಮೆಗಳ ಸ್ಥಾಪನೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗೆಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ನಂಜುಂಡಪ್ಪ ಹೇಳಿದರು.
ಸಭೆಯಲ್ಲಿ ನಂಜುಂಡಪ್ಪನವರು ಎತ್ತಿದ ಪ್ರಶ್ನೆ ಹಾಗೂ ನೀಡಿದ ಸಲಹೆ
ಪ್ರಶ್ನೆ : ಎಂಟು ದಿನಗಳಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ನೈಋತ್ಯ ರೈಲ್ವೆ ವಲಯ ಕಚೇರಿ ಸ್ಥಳಾಂತರವಾಗಿದೆ. ಆದರೆ, ಬೆಂಗಳೂರಿನಿಂದ ಹುಬ್ಬಳ್ಳಿಗೆ 8 ದಿನಗಳಲ್ಲಿ ಈ ಕಚೇರಿ ವಾಪಸ್ಸಾಗಲು ಯಾಕೆ ಸಾಧ್ಯವಾಗಿಲ್ಲ .
ಸಲಹೆ : ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡುವಾಗ ಸಮಾನ ನೀತಿ ಅನುಸರಣೆ ಸರಿಯಲ್ಲ . ಬದಲಿಗೆ ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ.
ಈ ಸಲಹೆ ಸೂಚನೆಗಳಿಗೆ ಮುಖ್ಯಮಂತ್ರಿ ಕೃಷ್ಣ ಅವರ ಪ್ರತಿಕ್ರಿಯೆ ತಿಳಿದುಬಂದಿಲ್ಲ . ಸಭೆಯಲ್ಲಿ ಸಚಿವರಾದ ಎಂ.ವೈ. ಘೋರ್ಪಡೆ, ಡಾ। ಎ.ಬಿ. ಮಾಲಕರೆಡ್ಡಿ , ಎಚ್.ಕೆ. ಪಾಟೀಲ್, ಎಚ್. ವಿಶ್ವನಾಥ್, ಡಿ.ಕೆ. ಶಿವಕುಮಾರ್, ಖಮರುಲ್ ಇಸ್ಲಾಂ, ಕಾಗೋಡು ತಿಮ್ಮಪ್ಪ ಭಾಗವಹಿಸಿದ್ದರು. ಯಥಾ ಪ್ರಕಾರ ಹಿರಿಯ ಅಧಿಕಾರಿಗಳು ಜೊತೆಗಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications