ಚಿತ್ತಾಪುರ ತಾಲ್ಲೂಕು ದಂಡಗುಂಡ ಗ್ರಾಮದ ಬಸ್ಸಿಗೆ ಭಾನುವಾರ ರಜೆ
ಚಿತ್ತಾಪುರ : ತಾಲ್ಲೂಕಿನ ದಂಡಗುಂಡ ಗ್ರಾಮಕ್ಕೆ ಓಡಿಸುವ ರೂಟ್ಬಸ್ಗೆ ಭಾನುವಾರ ರಜೆ ನೀಡುವ ಮೂಲಕ ಹೊಸ ಸಂಪ್ರದಾಯಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಂದಿ ಹಾಡಿದೆ.
ಭಾನುವಾರ ಬಂತೆಂದರೆ ದಂಡಗುಂಡ ಗ್ರಾಮಸ್ಥರಿಗೆ ಕಾಲೇ ಮೋಟಾರು. ಚಿತ್ತಾಪುರದಿಂದ 23 ಕಿಮೀ ದೂರದಲ್ಲಿರುವ ದಂಡಗುಂಡ ಗ್ರಾಮ ಈ ಭಾಗದ ಪ್ರಸಿದ್ಧ ಯಾತ್ರಾಸ್ಥಳವೂ ಹೌದು. ದಂಡಗುಂಡದ ಬಸವೇಶ್ವರ ಸ್ವಾಮಿಗೆ ತಾಲ್ಲೂಕಿನಲ್ಲಿ ಸಾವಿರಾರು ಭಕ್ತರಿದ್ದಾರೆ. ಗ್ರಾಮದ ಜನಸಂಖ್ಯೆ 2 ಸಾವಿರಕ್ಕೂ ಹೆಚ್ಚು .
ಸುತ್ತುಮುತ್ತಲಿನ ಅಳ್ಳಳ್ಳಿ ಹಾಗೂ ಸಾತನೂರು ಗ್ರಾಮಸ್ಥರಿಗೂ ಈ ಬಸ್ಸು ಸಂಪರ್ಕದ ಕೊಂಡಿಯಾಗಿದೆ. ವಾರಪೂರ್ತಿ ಸಂಚರಿಸುವ ಬಸ್ಸಿಗೆ ಭಾನುವಾರ ಮಾತ್ರ ರಜೆ. ಈ ರಜೆಗೆ ಸಂಸ್ಥೆ ನೀಡುವ ಕಾರಣ- ಆದಾಯದ ಕೊರತೆ. ಭಾನುವಾರ ಕೂಡ ಬಸ್ ಸಂಚಾರ ಆರಂಭಿಸಬೇಕು. ಇಲ್ಲದಿದ್ದರೆ ಡಿಪೊಗೆ ಮುತ್ತಿಗೆ ಹಾಕಲಾಗುವುದು ಎನ್ನುವುದು ಗ್ರಾಮಸ್ಥರ ಬೆದರಿಕೆ. ಅಂದಹಾಗೆ, ಈ ಸಂಪ್ರದಾಯ ಬೇರೆಡೆಗಳಲ್ಲೂ ಜಾರಿಯಲ್ಲಿದೆಯೋ ಅನ್ನುವುದು ತಿಳಿದುಬಂದಿಲ್ಲ .
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications