ಅದ್ಧೂರಿಯ ಮದುವೆಗೆ ಮಂಗಳಹಾಡಲು ಮುಖ್ಯಮಂತ್ರಿ ಕರೆ
ಬಾದಾಮಿ: ಹೆಣ್ಣು ಹೆತ್ತ ತಂದೆ ತಾಯಿಯರಿಗೆ ಹೊರೆಯಾಗುವ ಹಾಗೂ ದುಂದುಗಾರಿಕೆಯ ಅದ್ಧೂರಿಯ ಮದುವೆಗಳಿಗೆ ಮಂಗಳ ಹಾಡುವಂತೆ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕರೆ ನೀಡಿದ್ದಾರೆ. ವರದಕ್ಷಿಣೆ ಭೂತವನ್ನು ತೊಡೆದೋಡಿಸಲು ಮತ್ತು ದುಂದುವೆಚ್ಚ ತಪ್ಪಿಸಲು ಸಾಮೂಹಿಕ ವಿವಾಹಗಳು ದಾರಿದೀಪವಾಗಿವೇ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಡಿಸೆಂಬರ್ 8ರ ಶನಿವಾರ ಸರ್ವಧರ್ಮ ಸಮನ್ವಯ ಸಮಿತಿ ಇಲ್ಲಿ ಏರ್ಪಡಿಸಿದ್ದ ಸಾವಿರದ ಒಂದು ಜೋಡಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ನವವಧೂವರರನ್ನು ಹರಸಿ ಮಾತನಾಡುತ್ತಿದ್ದ ಅವರು, ಮದುವೆ ಎಂದರೆ ಹೆಣ್ಣಿನ ತಂದೆ ತಾಯಿಗಳನ್ನು ಸಾಲದ ಶೂಲಕ್ಕೆ ಏರಿಸುವ ವಿಧಿ ಎನ್ನುವಂತಾಗಿದೆ ಎಂದರು.
ಸಾಮೂಹಿಕ ಮತ್ತು ಸರಳ ವಿವಾಹಗಳಿಗೆ ಸಮಾಜದ ಕಣ್ಣು ತೆರೆಸುವ ಸಾಮರ್ಥ್ಯ ಇದೆ. ಎಲ್ಲ ಧರ್ಮದ ಧಾರ್ಮಿಕ ನಾಯಕರು ಈ ನಿಟ್ಟಿನಲ್ಲಿ ಜನರನ್ನು ಜಾಗೃತಗೊಳಿಸಬೇಕು ಎಂದರು. 1001 ಜೋಡಿ ಉಚಿತ ವಿವಾಹ ಏರ್ಪಡಿಸಿದ್ದ ಸರ್ವಧರ್ಮ ಸಮನ್ವಯ ಸಮಿತಿಯನ್ನು ಮುಖ್ಯಮಂತ್ರಿಗಳು ಮುಕ್ತಕಂಠದಿಂದ ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಮಾರುಕಟ್ಟೆ ಖಾತೆ ರಾಜ್ಯ ಸಚಿವ ಆರ್.ಬಿ. ತಿಮ್ಮಾಪೂರ್ ಅವರು ‘ಕಂಕಣ’ ಎಂಬ ಸ್ಮರಣ ಸಂಚಿಕೆಯ ಬಿಡುಗಡೆ ಮಾಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ಹುಬ್ಬಳ್ಳಿಯ ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ವಧೂವರಿಗೆ ಶುಭ ಹಾರೈಸಿದರು.
ನಗರಾಭಿವೃದ್ಧಿ ಸಚಿವ ಬಿ.ಬಿ.ಚಿಮ್ಮನಕಟ್ಟಿ ಅವರು ಮಾರ್ಗದರ್ಶನದಲ್ಲಿ ಸರ್ವಧರ್ಮ ಸಮನ್ವಯ ಸಮಿತಿ ಈ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಿತ್ತು. ಸುಮಾರು 3 ಲಕ್ಷಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications