ಚಿನ್ಮಯ ಮಿಷನ್ನಲ್ಲಿ ನಾರಾಯಣ ಹೃದಯಾಲಯದ 3ನೇ ಘಟಕ
ಬೆಂಗಳೂರು : ಹೃದಯಾಘಾತಕ್ಕೆ ಈಡಾದ ರೋಗಿಗಳಿಗೆ ತತ್ಕ್ಷಣವೇ ಚಿಕಿತ್ಸೆ ಒದಗಿಸುವ ದೃಷ್ಟಿಯಿಂದ ನಾರಾಯಣ ಹೃದಯಾಲಯವು ಇಂದಿರಾನಗರದ ಚಿನ್ಮಯ ಮಿಷನ್ ಆಸ್ಪತ್ರೆಯಲ್ಲಿ ಶನಿವಾರ ತನ್ನ ಮೂರನೇ ಹೃದ್ರೋಗ ಚಿಕಿತ್ಸಾ ಘಟಕ ಆರಂಭಿಸಿತು.
ಅತ್ಯಾಧುನಿಕ ಚಿಕಿತ್ಸಾ ಉಪಕರಣಗಳಿಂದ ಸುಸಜ್ಜಿತವಾದ ಈ ಹೃದ್ರೋಗ ಚಿಕಿತ್ಸಾ ಘಟಕ 8 ಹಾಸಿಗೆಗಳ ಸಾಮರ್ಥ್ಯದ್ದಾಗಿದೆ. ಈ ಘಟಕದಲ್ಲಿ ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ ದೊರಕಲಿದೆ ಎಂದು ಹೃದಯಾಲಯದ ವ್ಯವಸ್ಥಾಪಕ ನಿರ್ದೇಶಕ ಡಾ. ದೇವಿಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು ಮಹಾನಗರದಲ್ಲಿ ಇಂತಹ ಇನ್ನೂ ನೂರು ಹೃದ್ರೋಗ ಚಿಕಿತ್ಸಾ ಘಟಕ ತೆರೆಯುವ ಅಗತ್ಯ ಇದ್ದು, ಸಂಸ್ಥೆಯು ಈಗಾಗಲೇ ಬೆಂಗಳೂರು ದಂಡು ಪ್ರದೇಶದ ಇಎಸ್ಐ ಆಸ್ಪತ್ರೆ, ಪದ್ಮನಾಭನಗರದ ರಾಜಾ ಅಗ್ರಸೇನ ಆಸ್ಪತ್ರೆಗಳಲ್ಲಿ ಘಟಕ ಆರಂಭಿಸಿದೆ ಎಂದರು.
ರಾಜ್ಯ ಸರಕಾರ ಅನುಮತಿ ನೀಡಿದಲ್ಲಿ ರಾಜ್ಯದ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ತೆರೆಯಲು ಹೃದಯಾಲಯ ಸಿದ್ಧವಿದೆ ಎಂದು ಅವರು ತಿಳಿಸಿದರು. ಬಡ ಗ್ರಾಮೀಣ ರೋಗಿಗಳ ನೆರವಿಗಾಗಿ, ಸ್ಥಳೀಯ ಖಾಸಗಿ ವೈದ್ಯರಿಗೆ ಇಸಿಜಿ ಯಂತ್ರೋಪಕರಣ ನೀಡಿ, ಅಲ್ಲಿಯೇ ಹೃದ್ರೋಗಿಗಳಿಗೆ ಪ್ರಥಮ ಚಿಕಿತ್ಸೆ ದೊರಕಿಸಿಕೊಡಲು ಸಂಸ್ಥೆ ಉದ್ದೇಶಿಸಿದೆ ಎಂದು ಡಾ. ಶೆಟ್ಟಿ ಹೇಳಿದರು.
ಬೀದರ್, ಚಾಮರಾಜನಗರ, ಮಂಗಳೂರು, ಕೆಂಚನಹಳ್ಳಿ, ಕುಂದಾಪುರಗಳಲ್ಲಿ ಕೂಡ ಸದ್ಯದಲ್ಲೇ ಹೃದ್ರೋಗ ಚಿಕಿತ್ಸಾ ಘಟಕ ಆರಂಭಿಸಲು ಸಂಸ್ಥೆ ಸಿದ್ಧತೆ ನಡೆಸಿದೆ ಎಂದೂ ಅವರು ತಿಳಿಸಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications