ಕೆ.ಆರ್. ಪುರಂ ತೂಗು ಸೇತುವೆ ಇನ್ನೆರಡು ತಿಂಗಳಲ್ಲಿ ಪೂರ್ಣ
ಬೆಂಗಳೂರು : ಕೃಷ್ಣರಾಜಪುರಂ ಬಳಿ ನಿರ್ಮಿಸಲಾಗುತ್ತಿರುವ ತೂಗು ಸೇತುವೆ (ಗಾರ್ಡನ್ ಸಿಟಿ ಹೈವೇ ಬ್ರಿಡ್ಜ್) ಕಾಮಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ವಿಷಯವನ್ನು ದಕ್ಷಿಣ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಎಂಜಿನಿಯರ್ ಬಿ. ರಿಚರ್ಡ್ಸನ್ ತಿಳಿಸಿದ್ದಾರೆ.
ಸೋಮವಾರ ಎಫ್ಕೆಸಿಸಿಐ ಸಭಾಂಗಣದಲ್ಲಿ ವಾಣಿಜ್ಯೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಈ ಯೋಜನೆ ಪೂರ್ಣವಾಗುವ ಹೊತ್ತಿಗೆ 48 ಕೋಟಿ ರುಪಾಯಿ ವೆಚ್ಚ ಆಗಲಿದೆ ಎಂದರು.
ಸ್ವಿಸ್ನ ಎಂಎಸ್ಬಿಬಿಆರ್ ತಂತ್ರಜ್ಞಾನ ಸಹಕಾರದಿಂದ ಈ ಸೇತುವೆ ನಿರ್ಮಿಸಲಾಗುತ್ತಿದೆ. ಚೀನಾ ದೇಶದಲ್ಲಿ ಇಂತಹ ನೂರಕ್ಕೂ ಹೆಚ್ಚು ಸೇತುವೆಗಳಿವೆ. ಇಂತಹ ತಂತ್ರಜ್ಞಾನ ಬಳಸಿ ಸೇತುವೆ ನಿರ್ಮಿಸುವುದು ನಮಗೊಂದು ಸವಾಲಾಗಿದೆ. ಇದು ಈ ತಂತ್ರಜ್ಞಾನ ಬಳಸಿ ನಿರ್ಮಿಸಲಾದ ದೇಶದ ನಾಲ್ಕನೇ ಸೇತುವೆ ಆಗಲಿದೆ ಎಂದರು.
ವಾಸ್ತವವಾಗಿ ಸೇತುವೆ ನಿರ್ಮಾಣಕ್ಕೆ 30 ತಿಂಗಳ ಅವಧಿ ನೀಡಲಾಗಿತ್ತು. ನವೆಂಬರ್ನಲ್ಲೇ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ಭೂ ಸ್ವಾಧೀನ ಪ್ರಕ್ರಿಯೆ, ರಾಷ್ಟ್ರೀಯ ಹೆದ್ದಾರಿಯ ಪರ್ಯಾಯ ಮಾರ್ಗದಿಂದ ಸೇತುವೆ ಕಾಮಗಾರಿ ವಿಳಂಬವಾಯಿತು ಎಂದೂ ಅವರು ವಿವರಣೆ ನೀಡಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications