ಡಿಸೆಂಬರ್ 22, 23ರಂದು ರಾಜ್ಯಾದ್ಯಂತ ಮೆಡಿಕಲ್ ಬಂದ್
ಬೆಂಗಳೂರು : ರಾಜ್ಯದಲ್ಲಿರುವ ನಕಲಿ ವೈದ್ಯರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತೀಯ ವೈದ್ಯ ಸಂಘದ ರಾಜ್ಯ ಶಾಖೆ ಡಿಸೆಂಬರ್ 22 ಮತ್ತು 23ರಂದು ರಾಜ್ಯ ಮೆಡಿಕಲ್ ಬಂದ್ಗೆ ಕರೆ ಕೊಟ್ಟಿದೆ.
ರಾಜ್ಯ ಸರಕಾರಿ ವೈದ್ಯರ ಸಂಘ, ರಾಜ್ಯ ಕಿರಿಯ ವೈದ್ಯರ ಸಂಘ, ಕರ್ನಾಟಕ ವೈದ್ಯ ಅಧ್ಯಾಪಕರ ಸಂಘ ಹಾಗೂ ಭಾರತೀಯ ದಂತ ವೈದ್ಯರ ಸಂಘದ ರಾಜ್ಯ ಶಾಖೆ ಬಂದ್ಗೆ ಈಗಾಗಲೇ ಬೆಂಬಲ ಘೋಷಿಸಿವೆ. ಈ ವಿಷಯವನ್ನು ಬುಧವಾರ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಡಾ. ಎ. ಎಸ್. ಮಂತಗಾನಿಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ನಕಲಿ ವೈದ್ಯರಿರುವ ಬಗ್ಗೆ ದೂರುಗಳಿವೆ. ಆ ಬಗ್ಗೆ ಶೀಘ್ರ ತನಿಖೆ ನಡೆಸಿ ಅವರ ವೃತ್ತಿಯನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಬೇಕೆಂಬ ಸುಪ್ರೀಂ ಕೋರ್ಟ್ನ ಆದೇಶವನ್ನು ಪಾಲಿಸಬೇಕು ಎಂದು ವೈದ್ಯರ ಸಂಘ ಸರಕಾರವನ್ನು ಒತ್ತಾಯಿಸಿದೆ.
ವೈದ್ಯರ ಸಂಘದ ಇತರ ಬೇಡಿಕೆಗಳು :
- 5 ವರ್ಷದವರೆಗೆ ಹೊಸ ವೈದ್ಯಕೀಯ ಕಾಲೇಜಿಗೆ ಅನುಮತಿಕೊಡಬಾರದು.
- ವೃತ್ತಿ ನಿರತ ವೈದ್ಯರ ಮೇಲೆ ಸಾರ್ವಜನಿಕರು ನೀಡುವ ದೂರಿನ ಮೇಲೆ ಪೊಲೀಸರು ಅವರನ್ನು ಬಂಧಿಸುವ ಮೊದಲು ಭಾರತೀಯ ವೈದ್ಯ ಸಂಘದ ಪ್ರತಿನಿಧಿಗಳಿರುವ ಮೆಡಿಕಲ್ ಬೋರ್ಡ್ನ ಅನುಮತಿ ಪಡೆಯಬೇಕು.
- ವೈದ್ಯರು ಆಸ್ಪತ್ರೆ, ಕ್ಲಿನಿಕ್ಗಳಲ್ಲಿ ಚಿಕಿತ್ಸೆ ನೀಡುವಾಗ ಆಗಬಹುದಾದ ಮರಣವನ್ನು ಭಾರತೀಯ ದಂಡ ಸಂಹಿತೆ 304 ಮತ್ತು 304 ಎ ಪ್ರಕಾರ ವೈದ್ಯರ ಮೇಲೆ ಕಾನೂನು ಕ್ರಮ ಜರುಗಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಬಾರದು.
- ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಪಟ್ಟ ಬೋರ್ಡ್ ಮತ್ತು ಮಂಡಳಿಗಳಿಗೆ ವೈದ್ಯರು ಮಾತ್ರವೇ ಮುಖ್ಯಸ್ಥರಾಗಬೇಕು.
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications