ನಗರಗಳ ಕುಡಿಯುವ ನೀರು ಪೂರೈಕೆ ಖಾಸಗಿ ತೆಕ್ಕೆಗೆ: ಕೃಷ್ಣ ಇಂಗಿತ
ಬೆಂಗಳೂರು : ರಾಜ್ಯದ ನಗರ ಪ್ರದೇಶಗಳ ನೀರು ಸರಬರಾಜು ವ್ಯವಸ್ಥೆಯನ್ನು ಖಾಸಗಿಯವರಿಗೆ ಒಪ್ಪಿಸಲು ರಾಜ್ಯ ಸರಕಾರ ಚಿಂತಿಸಿದೆ. ಈ ಬಗ್ಗೆ ಸಾಧಕ ಬಾಧಕಗಳನ್ನು ಪರಿಶೀಲಿಸಲಾಗುತ್ತಿದೆ. ಈ ವಿಷಯವನ್ನು ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಲ್ಲಿ ತಿಳಿಸಿದ್ದಾರೆ.
ಕೃಷ್ಣರಾಜಪುರ ಕೇಂದ್ರವಾಗುಳ್ಳ ಬೆಂಗಳೂರು ಪೂರ್ವ ತಾಲೂಕಿನ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಗಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲ ನಾಗರಿಕರಿಗೂ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಒದಗಿಸಲು ನೀರು ಸರಬರಾಜು ವ್ಯವಸ್ಥೆಯನ್ನು ಖಾಸಗಿಯವರಿಗೆ ಒಪ್ಪಿಸುವುದು ಅನಿವಾರ್ಯವಾಗಿದೆ ಎಂದರು.
ಬೆಳೆಯುತ್ತಿರುವ ನಗರ ಪ್ರದೇಶಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರಕಾರಕ್ಕೆ ಕಷ್ಟಸಾಧ್ಯವಾಗಿದೆ. ನೀರು, ರಸ್ತೆ, ವಿದ್ಯುತ್ ಆಸ್ಪತ್ರೆಗಳ ನಿರ್ವಹಣೆಯನ್ನು ಸರಕಾರವೊಂದೇ ನೋಡಿಕೊಳ್ಳುವುದು ಸಾಧ್ಯವಿಲ್ಲ. ಹೀಗಾಗಿ ಸರಕಾರದ ಪಾಲುದಾರಿಕೆಯಲ್ಲಿ ಪ್ರಾಯೋಗಿಕವಾಗಿ ನೀರು ಸರಬರಾಜು ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿಕೊಡಲು ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದರು.
ಪ್ರಸಕ್ತ ಸನ್ನಿವೇಶದಲ್ಲಿ ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಅಭಿವೃದ್ಧಿ ಯೋಜನೆ ರೂಪಿಸಬೇಕಿದೆ. ಆ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಈ ಹೊತ್ತು ವಿಶ್ವದ ಗಮನವನ್ನೇ ಸೆಳೆದಿರುವ ಬೆಂಗಳೂರಿಗೆ, ಈ ಬ್ರಾಂಡ್ ನೇಮ್ ಕಾಯಂ ಆಗಬೇಕಾದರೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕು ಎಂದು ಕೃಷ್ಣ ಹೇಳಿದರು. ಸಕ್ಕರೆ ಹಾಗೂ ಪಶುಸಂಗೋಪನೆ ಖಾತೆ ಸಚಿವ ಎ. ಕೃಷ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications